ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವಂತೆ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮನವಿ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಸನ್ಮಾನಿಸಿದ ಅವರು, “ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಣೆ ಮಾಡಿರುವ ತಮ್ಮ ಸರ್ಕಾರಕ್ಕೆ ಅಭಿನಂದನೆ ಹಾಗೂ ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಬಜೆಟ್ನಲ್ಲಿ ಘೋಷಣೆ
ಮಾಡಿರುವುದು ಸ್ವಾಗತಾರ್ಹ” ಎಂದರು.
“ಅದೇ ರೀತಿ ಜಗತ್ತಿಗೆ ಪ್ರಜಾಪ್ರಭುತ್ವ ಕೊಟ್ಟಿದ್ದು ವಚನ ಸಾಹಿತ್ಯ, ಸರ್ವರಿಗೂ ಸಮಾನತೆ ಸಾರಿದ ಭೂಮಿ ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸುವುದರಿಂದ ಬಸವಾದಿ ಶರಣರ ತತ್ವಗಳು ಜಗದಗಲ ತಲುಪಿಸಲು ಸಹಕಾರಿ ಆಗುತ್ತದೆ. ವಚನ ಸಾಹಿತ್ಯ ಅಧ್ಯಯನ, ಸಂಶೋಧನೆ ನಡೆಸಲು ಅನುಕೂಲವಾಗುತ್ತದೆ” ಎಂದು ಮನವರಿಕೆ ಮಾಡಿದರು.
“ಈ ಬಗ್ಗೆ ಸರಕಾರದ ಗಮನ ಸೆಳೆದು ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಸೂಕ್ತ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಬೇಕು” ಶ್ರೀಗಳು ಎಂದು ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?
ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಪ್ರಮುಖರಾದ ಶಶಿಧರ ಕೋಸಂಬೆ, ಜಯರಾಜ ಖಂಡ್ರೆ, ಸಂಗಮೇಶ ಹುಣಜೆ ಮದಕಟ್ಟಿ, ರಾಜಕುಮಾರ ಬಿರಾದಾರ, ಸಂಜೀವಕುಮಾರ
ಜುಮ್ಮಾ, ನವಲಿಂಗ ಪಾಟೀಲ್ ಇದ್ದರು.