ಉಡುಪಿ | ಮಾದಕ ವ್ಯಸನದ ಬಗ್ಗೆ ನಿರಂತರ ಜಾಗೃತಿ ಅಗತ್ಯ – ಎಸ್ ಐ ನಂಜ ನಾಯ್ಕ್

Date:

Advertisements

ಆಧುನಿಕತೆ ಬೆಳೆದಂತೆ ವಿದ್ಯಾರ್ಥಿ ಜೀವನದಲ್ಲೂ ಬದಲಾವಣೆ ಆಗುತ್ತಿದೆ. ಹಲವು ರೀತಿಯ ಆಮಿಷಗಳಿಗೆ ತುತ್ತಾಗಿ, ವಿದ್ಯಾರ್ಥಿಗಳು, ಯುವ ಜನರು ಮಾದಕ ದ್ರವ್ಯದಂತಹ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಸಮಾಜದಲ್ಲಿ ಯುವ ಜನರು ಕೆಡುಕಿನಡೆಗೆ ಹೋಗುತ್ತಿದ್ದಾರೆ.

ವಿದ್ಯಾರ್ಥಿ ಜೀವನ ದುಶ್ಚಾಟ ಮುಕ್ತವಾಗಬೇಕಾದರೆ ಇಂಥ ಕಾರ್ಯಕ್ರಮ ನಿರಂತರವಾಗಿ ನಡೆಯಬೇಕು ಎಂದು ಕುಂದಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಂಜ ನಾಯ್ಕ್ ಹೇಳಿದರು.

ಅವರು ಇಂದು ಭಂಡಾರ್ ಕಾರ್ಸ್ ಕಾಲೇಜ್, ಎನ್ ಎಸ್ ಎಸ್, ಎನ್ ಎನ್ ಒ ಕಮ್ಯುನಿಟಿ ಸೆಂಟರ್ ಕುಂದಾಪುರ, ಜೆಸಿಐ ಕುಂದಾಪುರ ಸಿಟಿ ಇವರ ಸಂಯುಕ್ತ ಆಶ್ರಯದಲ್ಲಿ ಭಂಡಾರ್ ಕಾರ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆದ ಗುಟ್ಕಾ ಹಾಗು ಮಾದಕ ದ್ರವ್ಯ ಗಳ ಬಗ್ಗೆ ಜಾಗ್ರತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ ಕಾರ್ಸ್ ಕಾಲೇಜ್ ನ ಪ್ರಾಂಶುಪಾಲರಾದ ಶುಭಕರ ಆಚಾರಿ ವಹಿಸಿದ್ದರು. ಮಾನಸಿಕ ತಜ್ಞ ಡಾ ಪ್ರಕಾಶ್ ತೋಳಾರ್ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಎನ್ ಎನ್ ಒ ಕಮ್ಯುನಿಟಿ ಸೆಂಟರ್ ನ ಪ್ರದಾನ ಕಾರ್ಯದರ್ಶಿ ಹುಸೇನ್ ಹೈಕಾಡಿ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರಾದ ಜಿ ಎಮ್ ಗೊಂಡ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಪ್ರೊ ಸತ್ಯನಾರಾಯಣ ಹತ್ವಾರ್, ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷ ಯೂಸುಫ್ ಸಲೀಮ್, ನಿಕಟ ಪೂರ್ವ ಅಧ್ಯಕ್ಷ ರಾಘವೇಂದ್ರ ಕುಲಾಲ್, ಪೂರ್ವ ಅಧ್ಯಕ್ಷೆ ಡಾ ಸೋನಿ, ಎನ್ ಎಸ್ ಎಸ್ ಅಧಿಕಾರಿಗಳಾದ ಅರುಣ್ ಏ ಎಸ್, ರಾಮಚಂದ್ರ ಆಚಾರ್ ಇನ್ನಿತರರು ಉಪಸ್ಥಿತರಿದ್ದರು. ಕಾಲೇಜ್ ನ ವಿದ್ಯಾರ್ಥಿಗಳಾದ ಸಮೀಕ್ಷಾ ಸ್ವಾಗತಿಸಿದರು, ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು, ಕಿಶನ್ ಧನ್ಯವಾದ ಅರ್ಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X