ದಾವಣಗೆರೆ | ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಎಂದು ಡಂಗುರ ಸಾರಿದ ವ್ಯಕ್ತಿ

Date:

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿದೆ. ಈ ಬೆನ್ನಲ್ಲೇ ದಾವಣಗೆರೆ ತಾಲೂಕಿನ ಗೋಣಿವಾಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮಟೆ ಬಾರಿಸುತ್ತ, ‘ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ’ ಎಂಬ ಸಂದೇಶ ಸಾರಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

“ಇವತ್ತಿನಿಂದ ಯಾರೂ ಕರೆಂಟ್ ಬಿಲ್ ಕಟ್ಟಂಗಿಲ್ಲ. ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅರ್ಡರ್ ಮಾಡಿ ಕಳುಹಿಸಿದ್ದಾರೆ” ಎಂದು ವ್ಯಕ್ತಿಯೊಬ್ಬರು ಗೋಣಿವಾಡ ಗ್ರಾಮದಲ್ಲಿ ಸಂಚರಿಸಿ ತಮಟೆ ಬಾರಿಸುತ್ತ ಸಂದೇಶ ಸಾರಿದ್ದಾರೆ.

ತ್ವರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿರುವ ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನ ನಾಯಕರು ವಿದ್ಯುತ್‌ ಬಿಲ್‌ ಕಟ್ಟಬೇಡಿ ಎಂದು ಕರೆ ನೀಡಿದ ಬೆನ್ನಲ್ಲೇ ವಿದ್ಯುತ್ ಬಿಲ್ ಕಟ್ಟುವುದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿರೋಧ ವ್ಯಕ್ತವಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಕಾಂಗ್ರೆಸ್‌ ನೀಡಿದ್ದ ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ ಎಂದು ಹೇಳಲಾಗಿತ್ತು. ಈ ಹಿನ್ನೆಲೆ ಅನೇಕ ಕಡೆ ಟಿಕೆಟ್‌ ಖರೀದಿಸದೇ ನಿರ್ವಾಹಕರ ಜೊತೆಗೆ ವಾಗ್ವಾದ ನಡೆಸುವ ವಿಡಿಯೋಗಳು ವೈರಲ್‌ ಆಗುತ್ತಿವೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಕುಕ್ಕರ್‌ ಸ್ಪೋಟ ಪ್ರಕರಣ; ಪರ-ವಿರೋಧ ಚರ್ಚೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ...

ತುಮಕೂರು | ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭ ವಿರೋಧಿಸಿ ಪ್ರತಿಭಟನೆ

ಹೇಮಾವತಿ ಎಕ್ಸ್  ಪ್ರೆಸ್ ಕೆನಾಲ್ ಕಾಮಗಾರಿ ಪುನರಾರಂಭವನ್ನು ವಿರೋಧಿಸಿ ಇಂದು ಮಾಜಿ...

ಯಾದಗಿರಿ | ಜಾತಿಗಣತಿ ವರದಿ ಅಂಗೀಕರಿಸಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಪ್ರತಿಭಟನೆ

ಅಕ್ಟೋಬರ್ 25ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ...