ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸಲ್ಲಿದ್ದಾರೆ: ಹಿರಿಯ ಶಾಸಕ ದೇಶಪಾಂಡೆ

Date:

Advertisements

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ ಎಂದು ಹಿರಿಯ ಶಾಸಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌ ವಿ ದೇಶಪಾಂಡೆ ಹೇಳಿದರು.

ಉತ್ತರ ಕನ್ನಡದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಬದಲಾವಣೆ ಮಾತು ನಮ್ಮ ಪಕ್ಷದಲ್ಲಿ ಇಲ್ಲ. ಅದು ವಿರೋಧ ಪಕ್ಷದ ಮಾತು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. 2013ರಲ್ಲಿ ಇದ್ದ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಇಲ್ಲಾ ಎನ್ನುವುದು ಕೆಲವರ ಪ್ರಶ್ನೆ. ಅವರಿಗೆ ವಯಸ್ಸಾಯ್ತು ಹಿಂದಿನ ಸಿದ್ದರಾಮಯ್ಯರೇ ಇರಲು ಹೇಗೆ ಸಾಧ್ಯ? ಹಾಗೆ ನನಗೂ ವಯಸ್ಸಾಗಿದೆ. ಹಿಂದಿನ ರೀತಿಯಲ್ಲಿಯೇ ಇರಲು ಸಾಧ್ಯವಾಗುತ್ತಾ” ಎಂದು ಪ್ರಶ್ನಿಸಿದರು.

“ಆದರೆ, ಅವರಿಗೆ ತಾಳ್ಮೆ ಇದೆ. ಆಡಳಿತ ಮಾಡುವ ಶಕ್ತಿ ಇದೆ. 5ವರ್ಷ ಅವರು ಮುಖ್ಯಮಂತ್ರಿ ಆಗಿ ಮುಂದವರೆಯಲ್ಲಿದ್ದಾರೆ ಸಿ.ಎಂ ಬದಲಾವಣೆ ಚರ್ಚೆ ನಮ್ಮಲ್ಲಿ ಆಗಿಲ್ಲಾ. ಎಲ್ಲರೂ ಒಗ್ಗಟ್ಟಾಗಿ ಇದ್ದೇವೆ” ಎಂದು ಪುನರುಚ್ಚರಿಸಿದರು.

Advertisements

“ದಸರಾ ನಂತರ ಸಿಎಂ ಬದಲಾವಣೆ ಆಗಲಿದೆ ಎಂಬ ವಿಪಕ್ಷ ನಾಯಕ ಆರ್‌ ಅಶೋಕ್ ಅವರ ಹೇಳಿಕೆಗೆ, “ಅಶೋಕ್ ಅವರು ಹಾಗೆ ಹೇಳಲೇಬೇಕು. ಇಲ್ಲಾ ಅಂದರೆ ಅವರು ಬದಕುಬೇಕಲ್ಲಾ? ಅವರು ಬಡಪಾಯಿ, ಇಲ್ಲಾವಾದರೆ ಅವರನ್ನೇ ಬದಲಾವಣೆ ಮಾಡಿಬಿಡುತ್ತಾರೆ. ಅಶೋಕ್ ಅವರು ಸಿಎಂ ಬದಲಾವಣೆಯನ್ನು ನಿದ್ದೆಗಣ್ಣಿನಲ್ಲಿ ಹೇಳಿರಬೇಕು. ಹಾಗೆಯೇ ಶಾಸಕರು ಮಾಧ್ಯಮದವರ ಕೈಗೆ ಸಿಗಬಾರದು. ಸಿಕ್ಕರೆ ಏನೇನೋ ಹೇಳಿಕೆಗಳು ಹೆಡ್ಡಿಂಗ್‌ನಲ್ಲಿ ಬರ್ತಾವೆ” ಎಂದರು.

ಇದನ್ನೂ ಓದಿ: ದೇವನಹಳ್ಳಿ ರೈತರ ಜೊತೆ ಜು.4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಸರ್ಕಾರ ರಚನೆ ಆದ ದಿನದಿಂದ ಇಂದಿನವರೆಗೂ ದಿನಕಳದಂತೆ ಇನ್ನೂ ಹೆಚ್ಚು ಗಟ್ಟಿಯಾಗಿದೆ. ಹೈಕಮಾಂಡ್ ಸಂಪೂರ್ಣ ಬೆಂಬಲ ಇದೆ. ನಮ್ಮ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಸಚಿವರು ಎಲ್ಲರೂ ಕೂಡಿ ಕೆಲಸ ಮಾಡ್ತಾ‌ ಇದ್ದಾರೆ. ಆದ್ದರಿಂದ ಬದಲಾವಣೆ ಬಗ್ಗೆ ಚರ್ಚೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X