- ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧಿಸಿದೆ
- ಕಾನೂನು ರೀತಿಯ ನಿರ್ಣಯದಂತೆ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಆಗಿದೆ
“ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರೇ ಬಂಜಾರ ಸಮುದಾಯದ ಜನ ತಪ್ಪು ಗ್ರಹಿಕೆಯಿಂದ ಕಲ್ಲು ತೂರಾಟ ಮಾಡಿದ್ದಾರೆ ಎಂದಿದ್ದಾರೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಮಾಡಾಳ್ ವಿರೂಪಾಕ್ಷಪ್ಪ ಬಂಧನ ವಿಚಾರವಾಗಿ ಬೆಂಗಳೂರಿನಲ್ಲಿ ಮಂಗಳವಾರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, “ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧ ಮಾಡಿಕೊಂಡು ಬಂದಿದೆ. ಈ ಉದ್ದೇಶಕ್ಕೆ ಈಗ ವಿರೋಧ ಮಾಡಿರಬಹುದು” ಎಂದರು.
“ಮಾಡಾಳ್ ವಿರೂಪಾಕ್ಷಪ್ಪ ಬಂಧನ ಮೊದಲ ದಿನವೇ ಆಗಬೇಕಿತ್ತು, ತಡವಾಗಿ ಆಗಿದೆ. ಕಾನೂನು ರೀತಿಯ ನಿರ್ಣಯದಂತೆ ಆಗಿದೆ. ರೆಡ್ ಹ್ಯಾಂಡ್ ಆಗಿ ಅವರ ಮಗ ಸಿಕ್ಕಿಬಿದ್ದಿರುವುದರಿಂದ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಬಂಧನ ಸರಿಯಾಗಿದೆ” ಎಂದು ತಿಳಿಸಿದರು.
“2018ರ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತು ಎಂದು ಸಿ ಪಿ ಯೋಗೀಶ್ವರ್ ಸತ್ಯವನ್ನೇ ಹೇಳಿದ್ದಾರೆ. ಅವರಿಗೆ ಧನ್ಯವಾದ” ಎಂದರು.