ಸಿಂದಗಿ | ದಲಿತ ವ್ಯಕ್ತಿ ಮಹದೇವಪ್ಪ ಹರಿಜನ ಹತ್ಯೆ ಖಂಡಿಸಿ ಕಾಲ್ನಡಿಗೆ ಜಾಥಾ ಆರಂಭಿಸಿದ ದಸಂಸ

Date:

Advertisements

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಗ್ರಾಮದಲ್ಲಿ ಕೃಷಿ ಜಮೀನು ವಿಚಾರವಾಗಿ ನಡೆದ ಹತ್ಯೆಯನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ ಕಾಲ್ನಡಿಗೆ ಜಾಥಾ ಆರಂಭಿಸಿದೆ. ದಲಿತ ಸಮುದಾಯದ ಮಹದೇವಪ್ಪ ಹರಿಜನ ಪೂಜಾರಿ ಕೊಲೆಯ ವಿರುದ್ಧ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಈ ಹೋರಾಟ ಆರಂಭವಾಗಿದೆ.

ದಸಂಸ ಜಿಲ್ಲಾ ಸಂಚಾಲಕ ಶರಣು ಶಿಂಧೆ ಮಾತನಾಡಿ, “ಜಾಥಾ ಶನಿವಾರ ಸಿಂದಗಿ ಪಟ್ಟಣಕ್ಕೆ ಪ್ರವೇಶಿಸಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ತಾಲೂಕು ಆಡಳಿತ ಸೌಧ ತಲುಪಲಿದೆ. ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು” ಎಂದರು.

ಇನ್ನೋರ್ವ ಸಂಚಾಲಕ ಚಂದ್ರಕಾಂತ ಸಿಂಗೆ ಮಾತನಾಡಿ, “ಕೊಲೆಗೈದು ನಾಲ್ಕು ತಿಂಗಳು (ಮೇ.31) ಗತಿಸಿದರೂ ಆರೋಪಿಗಳನ್ನು ಹಿಡಿಯುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆ. ಯಾರನ್ನಾದರೂ ರಕ್ಷಿಸೋಕೆ ಇಲಾಖೆ ನಿಂತಂತಿದೆ ಎನ್ನುವ ಗುಮಾನಿ ಮೂಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಿಂದಗಿ | ಮುಂದುವರೆದ ಸೂರಿಲ್ಲದವರ ಸತ್ಯಾಗ್ರಹ

ಪ್ರತಿಭಟನೆಯಲ್ಲಿ ಶ್ರೀನಿವಾಸ ಓಲೆಕಾರ, ಪರಶುರಾಮ ದಂಡಿವಾರ, ಲಕ್ಕಪ್ಪ ಬಡಿಗೇರ, ಪ್ರಕಾಶ್ ಗುಡಿಮನಿ, ಮಂಜುನಾಥ ಎಂಟಮಾನ, ಪರಶುರಾಮ ಕಾಂಬಳೆ, ರವಿ ಆಲಹಳ್ಳಿ, ಧರ್ಮಣ್ಣ ಎಂಟಮಾನ, ಬಸು ತಳಕೆರಿ, ಶಬ್ಬೀರ್ ಪಟೇಲ, ರಾಜು ಸಿಂದಗೇರಿ, ಶಿವು ವಾಲಿಕಾರ, ಶ್ರೀಶೈಲ ಬೂದಿಹಾಳ ಜಾಥಾ ನೇತೃತ್ವ ವಹಿಸಿದ್ದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪೊಲೀಸ್‌ ಇಲಾಖೆ ವಿರುದ್ಧ ಘೋಷಣೆ ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X