ಸಿಂದಗಿ | ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ಯಾರೇಜ್ ಮಾಲೀಕರು, ಕಾರ್ಮಿಕರಿಂದ ಪ್ರತಿಭಟನೆ

Date:

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಪ್ಪು ಸುಲ್ತಾನ್ ಅಂಜುಮನ್ ಗ್ಯಾರೇಜ್ ಲೈನ್ ಮಾಲೀಕರು-ಕಾರ್ಮಿಕರ ಸಂಘ ಹಾಗೂ ಸಿಐಟಿಯು ಸಂಘಟನೆ ವತಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ಪ್ರತಿಭಟನೆ ಮಾಡಲಾಯಿತು.

- Advertisement -

ಆ ಬಳಿಕ ತಹಶೀಲ್ದಾರ್ ಮುಖಾಂರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷರಾದ ಅಣ್ಣಾರಾಯ ಇಳಗೆರಿ ಮಾತನಾಡಿ, ಸಿಂದಗಿ ನಗರದಲ್ಲಿ ಇರುವ ಮುಸ್ಲಿಂ ಸಮಾಜ ಖಬರಸ್ಥಾನಕ್ಕೆ ಹೊಂದಿಕೊಂಡು ಅಂಜುಮನ ಜಾಗದಲ್ಲಿ ಕಳೆದ 35 ರಿಂದ 40 ವರ್ಷಗಳಿಂದ ಇದ್ದಾರೆ. ಬಡ ಮುಸ್ಲಿಂ ಹಾಗೂ ಹಿಂದು ಜನರು ಗುಡಿಸಲು, ಶೆಡ್ಡುಗಳು ಕಚ್ಚಾ ಮನೆಗಳನ್ನು ಕಟ್ಟಿಕೊಂಡು ವಾಸವಾಗಿದ್ದಾರೆ. ಹಲವಾರು ಕುಟುಂಬಗಳು ತಮ್ಮ ಕುಟುಂಬ ನಿರ್ವಹಣೆಗೆ ಸಣ್ಣಪುಟ್ಟ ಬೀಡಾ ಅಂಗಡಿ, ಚಹಾ ಅಂಗಡಿ, ಪಂಚರ್ ಅಂಗಡಿ, ಗ್ಯಾರೇಜ್ ಗಳು, ಫ್ಯಾಬ್ರಿಕೆಟಿಂಗ ಅಂಗಡಿಗಳು ಹೀಗೆ ಹಲವಾರ ರೀತಿಯ ಕಸಬುಗಳನ್ನು ಮಾಡುತ್ತಾ ತಮ್ಮ ಕುಟುಂಬ ನಿರ್ವಣೆ ಮಾಡಿಕೊಂಡು ಬಂದಿದ್ದಾರೆ. ಸದರಿ ನಿವೇಶನ ಬಿಟ್ಟರೆ ಬೇರೆ ಯಾವುದೆ ರೀತಿಯ ಆಸ್ತಿ ಇರುವುದಿಲ್ಲ. ಈಗ ಇರುವ ಜಾಗದಲ್ಲಿ ಕಷ್ಟಪಟ್ಟು ದುಡಿದು ಜೀವನ ಸಾಗಿಸುವ ಜನರಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಅನೇಕ ಜನ ಯುವಕ ಯುವತಿಯರು ವಿದ್ಯಾವಂತರಾಗಿದ್ದಾರೆ. ಕಂಪನಿಗಳಲ್ಲಿ ಆಗಲಿ ಸರಕಾರದಲ್ಲಾಗಲಿ ಯಾವುದೆ ಕೆಲಸ ಸಿಗದೆ ಇದ್ದುದರಿಂದ ಆನಿವಾರ್ಯವಾಗಿ ಅಂಗಡಿಗಳು ಗ್ಯಾರೇಜ್ ಹಾಕಿಕೊಂಡು ಚಿಕ್ಕಪುಟ್ಟ ಕೆಲಸಗಳನ್ನು ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದಾರೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಯಾರೋ ಕೆಲವರು ಬಂದು “ನಾವು ಮುಸ್ಲಿಂ ಕಬರಸ್ಥಾನ ಕಮಿಟಿಯವರು. ಈ ಜಾಗ ನಮ್ಮದು. ಈ ಜಾಗ ಖಾಲಿ ಮಾಡಬೇಕು. ಇಲ್ಲದೆ ಹೋದರೆ ಪೊಲೀಸರನ್ನು ಕರೆ ತಂದು ನಿಮ್ಮನ್ನು ಇಲ್ಲಿಂದ ಕಿತ್ತು ಹಾಕುತ್ತೇವೆ. ಕೋರ್ಟ್ ಆದೇಶವಿದೆ. ನಿಮ್ಮನಯ ಜೈಲಿಗೆ ಕಳಿಸುತ್ತೇವೆ ಎಂದು ಹೆದರಿಸುತ್ತಿದ್ದಾರೆ” ಎಂದರು.

1001346178

ಹೀಗಾಗಿ ಸರಕಾರದ ಅಥವಾ ಸಂಬಂಧಪಟ್ಟವರು ಸರಕಾರಿ ಕಾನೂನ ಅನುಸಾರ ಸದರಿ ನಿವೇಶನವನ್ನು ಖಾಯಂ ಆಗಿ ಮಂಜೂರು ಮಾಡಬೇಕು. ಇಲ್ಲವೆ ಭೂ ಬಾಡಿಗೆ ಮಂಜೂರು ಮಾಡಬೇಕು ಎಂದು ತಹಶೀಲ್ದಾರ್ ಅವರಲ್ಲಿ ಮನವಿ ಮಾಡಿದರು.

ಈ ಹೋರಾಟಕ್ಕೆ ದಲಿತ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್.ಎ.ಸಿಂದಗಿಕರ ಹಾಗೂ ಮುಸ್ಲಿಂ ಮುಖಂಡರಾದ ರಹೀಮ ದುದನಿಯವರು ಬೆಂಬಲಿಸಿದರು.

ಈ ಸಂದರ್ಭದಲ್ಲಿ ಜಾಫರ್ ಇನಾಮಾದಾರ, ಇಬ್ರಾಹಿಂ ಸುತರಾ, ಬಶೀರ್ ಸಾಬ್ ಕಡಗಿ, ಸೈನಾಜಾ ಬಾಗವಾನ, ರಾಜು ಮುಲ್ಲಾ, ಪ್ರತಿಭಾ ಕೊರಡಗಿ, ಸರಸ್ವತಿ ಮಠ, ರಮೇಶ ತಳವಾರ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...