ಸಿಂಧಗಿ | ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್, ಔಷಧಿ ಕಿಟ್ ವಿತರಣೆ

Date:

Advertisements

ವಿಜಯಪುರ ಜಿಲ್ಲೆ ಸಿಂಧಗಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಮೊಬೈಲ್ ಫೋನ್, ಸಮವಸ್ತ್ರ ಹಾಗೂ ಫಲಾನುಭವಿಗಳಿಗೆ ಔಷಧಿ ಕಿಟ್ ವಿತರಣಾ ಕಾರ್ಯಕ್ರಮವು ಜರುಗಿತು.

ಈ ವೇಳೆ ಮಾತನಾಡಿದ ಶಾಸಕ ಅಶೋಕ್ ಎಂ ಮನಗೂಳಿ, ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಳಮಟ್ಟದಲ್ಲಿ ಕಡಿಮೆ ಗೌರವಧನದಲ್ಲಿ ತುಂಬಾ ಕಷ್ಟಪಟ್ಟು ಶ್ರಮಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಇಲಾಖೆಗಳಿಗೆ ಮಾತೃ ಇಲಾಖೆಯಾಗಿದೆ” ಎಂದರು.

“ಕರ್ನಾಟಕ ಸರ್ಕಾರವು ಅಂಗನವಾಡಿ ಮೇಲ್ವಿಚಾರಕಿಯರಿಗೆ, ಕಾರ್ಯಕರ್ತರಿಗೆ ಹಾಗೂ ಫಲಾನುಭವಿಗಳಾದ ಮಕ್ಕಳಿಗೆ ಮತ್ತು ಗರ್ಭಿಣಿ ಬಾಣಂತಿಯರ ಹಿತದೃಷ್ಟಿಯಿಂದ ಮೊಬೈಲ್ ಫೋನ್, ಔಷಧಿ ಕಿಟ್, ತೂಕದ ಯಂತ್ರಗಳು ಕಾರ್ಯಕರ್ತರಿಗೆ ಮತ್ತು ಸಹಾಯಕರಿಗೆ ಸಮವಸ್ತ್ರ ಮತ್ತು ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ
ಮಕ್ಕಳ ಪ್ರಪಂಚ ಪುಸ್ತಕಗಳನ್ನು ವಿತರಿಸುತ್ತಿರುವುದು ತುಂಬಾ ಹೆಮ್ಮೆಯ ವಿಷಯ” ಎಂದರು.

ಸಿಂಧಗಿಯ 5 ಕುಟುಂಬಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್ ಪುಸ್ತಕಗಳನ್ನು ವಿತರಿಸಿದರು. ಹೆಣ್ಣು ಮಕ್ಕಳ ಲಿಂಗಾನುಪಾತ, ಸಾಕ್ಷರತೆ ಹೆಚ್ಷಿಸುವ ಪ್ರಯುಕ್ತ ಜಾರಿಯಾಗಿರುವ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಅಡಿ ತಿಳುವಳಿಕೆ ಮೂಡಿಸಲು ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು.

Advertisements
Bose Military School

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ ಚೌಹಾಣ್ ಮಾತನಾಡಿದರು. ಕಾರ್ಯಕ್ರಮವನ್ನು ಜಯಶ್ರೀ ದೊಡ್ಡಮನಿ ನಿರ್ವಹಿಸಿದರು.

ಇದನ್ನು ಓದಿದ್ದೀರಾ? ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಅಂಗನವಾಡಿ ಸಂಘಟನೆಯ ಪದಾಧಿಕಾರಿಗಳಾದ ಸರಸ್ವತಿ ಮಠ, ಪ್ರತಿಭಾ ಕುರುಡೆ, ಮೇಲ್ವಿಚಾರಕಿಯರು, ಸಿಬ್ಬಂದಿ ವರ್ಗ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜು.9ರಂದು ಕಾರ್ಮಿಕ ಸಂಘಟನೆಗಳ ಮುಷ್ಕರ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು ಕಾರ್ಮಿಕ ಸಂಘಗಳು...

ಉ. ಕನ್ನಡ | ಮೂಲ ಸೌಕರ್ಯಗಳಿಂದ ವಂಚಿತಗೊಂಡಿರುವ ಗೌಳಿ ದಡ್ಡಿಯ ಕುಟುಂಬಗಳು: ಪರಿಹಾರ ಯಾವಾಗ?

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿ...

ಬೀದರ್‌ | ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

ರಾಜ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ...

ರಾಯಚೂರು | ಬಸ್‌ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ; ಆಸ್ಪತ್ರೆಗೆ ದಾಖಲು

ಸಾರಿಗೆ ಬಸ್‌ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು...

Download Eedina App Android / iOS

X