ಸಿಂಧನೂರು | ಬೀದಿ ಬದಿ ವ್ಯಾಪಾರಸ್ಥರ ತೆರವು; ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಂಸದರಿಗೆ ಮನವಿ

Date:

Advertisements

ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆಯುತ್ತಿರುವ ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಸ್ಪಂದಿಸಿ, ವ್ಯಾಪಾರ ವಹಿವಾಟಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸಂಸದ ರಾಜಶೇಖರ್ ಹಿಟ್ನಾಳ ಅವರಿಗೆ ಬೀದಿ ಬದಿ ವ್ಯಾಪಾರಿಗಳ ಸಂಘ ಹಕ್ಕೊತ್ತಾಯ ಸಲ್ಲಿಸಿದೆ.

ನಗರದ ಪ್ರವಾಸಿ ಮಂದಿರಕ್ಕೆ ಸಂಸದರು ಆಗಮಿಸುತ್ತಿದ್ದಾರೆ ಎಂದು ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ವ್ಯಾಪಾರಿಗಳು ರಾತ್ರಿ 10 ಗಂಟೆ ವೇಳೆಗೆ ಜಮಾವಣೆಗೊಂಡು ನಗರಸಭೆ ಹಾಗೂ ಕಂದಾಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದರು.

ಕಳೆದ 33 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದೆ. ಇಲ್ಲಿಯವರೆಗೂ ಯಾರು ನಮ್ಮ ಗೋಳು ಕೇಳುವವರು ಇಲ್ಲ ಎಂದು ಸಂಸದರ ಮುಂದೆ ಅಳಲು ತೋಡಿಕೊಂಡರು. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಒಂದು ತಿಂಗಳಾಗಿದೆ. ಜೀವನ ನಿರ್ವಹಣೆಗೆ ತುಂಬಾ ಕಷ್ಟಕರವಾಗಿದೆ ಎಂದು ಬೇಸರ ಹೊರಹಾಕಿದರು.

Advertisements

ದಿನನಿತ್ಯದ ಪದಾರ್ಥಗಳ ಬೆಲೆ ಹೆಚ್ಚಾಗುತ್ತಿದೆ. ಇದರ ನಡುವೆ ನಮ್ಮನ್ನು ತೆರವುಗೊಳಿಸಿ ಇನ್ನಷ್ಟು ಅತಂತ್ರದಲ್ಲಿ ಸಿಲುಕಿಸಲಾಗುತ್ತಿದೆ ಎಂದು ಕಣ್ಣೀರಿಟ್ಟರು.

ಸಂಸದ ರಾಜ್ ಶೇಖರ್ ಹಿಟ್ನಾಳ ಅವರು ಮಾತನಾಡಿ, “ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿ ಎರಡು ದಿನಗಳಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ಹೋರಾಟ ಕೈ ಬಿಡಿ” ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಸಿಂಧನೂರು ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಆಗ್ರಹ

ಈ ವೇಳೆ ಡಿ.ಎಚ್. ಪೂಜಾರ , ವ್ಯಾಪಾರಿಗಳು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X