ಶಿರಾ | ನ್ಯಾಯಗೆರೆ ಕೆರೆ ಏರಿ ಮೇಲೆ ವಿಜಯ ನಗರ ಅರಸರ ಕಾಲದ ಶಾಸನ ಪತ್ತೆ

Date:

Advertisements

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರ ಸಾಮ್ರಾಜ್ಯ  ಕಾಲದ ಶಾಸನ ಪತ್ತೆಯಾಗಿದೆ.

ಮಂಡ್ಯ ವಿಶ್ವವಿದ್ಯಾಲಯದ ಮಹಿಳಾ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಮುಖ್ಯಸ್ಥ ಹಾಗೂ ಪ್ರಾಚಾರ್ಯ ಡಾ.ಗುರುರಾಜ್ ಪ್ರಭು.ಕೆ ಇವರ ಮಾರ್ಗದರ್ಶನದಲ್ಲಿ ಮಹಾಲಿಂಗೇಗೌಡ.ಜಿ ಸಂಶೋಧನಾ ವಿದ್ಯಾರ್ಥಿ ಇವರು ಸಂಶೋಧನಾ ಕ್ಷೇತ್ರ ಕಾರ್ಯ ಕೈಗೊಂಡಾಗ ನ್ಯಾಯಗೆರೆ ಕೆರೆ ಏರಿಯ ಪಕ್ಕದಲ್ಲಿ ಶ್ರೀ ದೇವರಾಜಪ್ಪನವರ ಜಮೀನಿನಲ್ಲಿ ವಿಜಯನಗರ ಸಾಮ್ರಾಜ್ಯಕ್ಕೆ ಸೇರಿದ ಶಾಸನ ಪತ್ತೆಯಾಗಿದೆ. 

 ಶಾಸನವು 4 ಅಡಿ ಉದ್ದ,  2 ಅಡಿ ಅಗಲದ ಚಪ್ಪಡಿ ಕಲ್ಲಿನಲ್ಲಿ ಕನ್ನಡ ಭಾಷೆ ಲಿಪಿಯಲ್ಲಿರುವ 14-10-1528 ರಲ್ಲಿ ಬರೆಸಿರುವ ಶಿಲಾಶಾನವಾಗಿದೆ. ಇದು ಕೃಷ್ಣದೇವರಾಯನ ಕಾಲಕ್ಕೆ ಸೇರಿದ್ದು ಇದರಲ್ಲಿ ಶ್ರೀ ತೊಂಟಿಲಗೌಡನು ಮೂಗೆಗೆರೆ (ಮೂಗನಹಳ್ಳಿ) ಪ್ರತಿನಾಮವಾಗಿ ಚೆನ್ನಾಪುರ ಎಂಬ ಸರ್ವಮಾನ್ಯದ ಅಗ್ರಹಾರವಾದ ಇಲ್ಲಿನ ಕೆರೆಯನ್ನು ಕಟ್ಟಿಸಿದ್ದು ಮೂಗನಹಳ್ಳಿಯ ಕಂನಪ್ಪನು ತಮ್ಮ ತಂದೆ ಜುಂಜಗೌಡ ಬೊಮ್ಮಗೌಡರಿಗೆ ಧರ್ಮಾರ್ಥವಾಗಿ ಹಾಕಿಸಿದ ಶಾಸನ. ಇದು ತಿಮ್ಮರಸ ಮತ್ತು ಮಾದರಸ ಹೆಸರಿನಲ್ಲಿ ದಾನ ನಿಡಿದ್ದಾನೆ ಎಂಬ ಉಲ್ಲೇಖವಿದೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X