ಶಿರಸಿ | ಸೈಬರ್ ವಂಚನೆ; ಮುಂಬೈ ಪೊಲೀಸರ ಸೋಗಿನಲ್ಲಿ ₹89.90 ಲಕ್ಷ ಹಣ ಲೂಟಿ

Date:

Advertisements

ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡ ಶಿರಸಿಯ ಪ್ರಗತಿ ನಗರದ ನಿವಾಸಿಯೊಬ್ಬರು ಬರೋಬ್ಬರಿ ₹89.90 ಲಕ್ಷ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರವೀಂದ್ರ ಕೃಷ್ಣ ಹೆಗಡೆ ಎಂಬುವವರಿಗೆ ಅಪರಿಚಿತ ವ್ಯಕ್ತಿಗಳಿಂದ ವಾಟ್ಸ್‌ಪ್ ವೀಡಿಯೊ ಕರೆ ಬಂದಿದೆ ಕರೆ ಮಾಡಿದವರು ತಮ್ಮನ್ನು ಮುಂಬೈ ಕೊಲಾಬಾ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದಾರೆ. ಹೆಗಡೆ ಅವರ ಖಾತೆಗೆ ಕಪ್ಪು ಹಣದ ವ್ಯವಹಾರ ನಡೆದಿದೆ, ನಿರ್ದಿಷ್ಟವಾಗಿ ಜೆಟ್ ಏರ್‌ವೇಸ್‌ನ ಮನೀಶ್ ಗೋಯಲ್ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅವರ ಮೇಲೆ ಕಪ್ಪು ಹಣ ಮತ್ತು ಮನಿ ಲಾಂಡರಿಂಗ್ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬೆದರಿಕೆಗಳಿಗೆ ಹೆದರಿದ ರವೀಂದ್ರ ಹೆಗಡೆ, ಸೈಬರ್ ವಂಚಕರ ಸೂಚನೆಗಳಿಗೆ ಮಣಿದು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಂದ ಹಣವನ್ನು ವರ್ಗಾಯಿಸಿದ್ದಾರೆ. ಶಿರಸಿ ನಗರದ ಕೆನರಾ ಬ್ಯಾಂಕ್, ಅಶ್ವಿನಿ ಸರ್ಕಲ್‌ನಲ್ಲಿರುವ ಎಸ್‌ಬಿಐ ಬ್ಯಾಂಕ್ ಮತ್ತು ಕರ್ನಾಟಕ ಬ್ಯಾಂಕ್ ಖಾತೆಗಳಿಂದ ಒಟ್ಟು ₹89,90,000 ಹಣವನ್ನು ಸೈಬರ್ ವಂಚಕರು ಮೋಸದಿಂದ ವರ್ಗಾಯಿಸಿಕೊಂಡಿದ್ದಾರೆ.
ವಂಚನೆಗೆ ಒಳಗಾದ ನಂತರ ರವೀಂದ್ರ ಹೆಗಡೆ ಅವರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ, ತಡವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಈ ವಂಚನೆ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಂಡು ತಮ್ಮ ಹಣವನ್ನು ಮರಳಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisements

ಇದನ್ನೂ ಓದಿ: ಅಮೆರಿಕದಲ್ಲಿ ನಡೆಯುವ ಅಂತಾರಾಷ್ಟ್ರೀಯ ಶೃಂಗಸಭೆಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಆಯ್ಕೆ

ಸೈಬರ್ ಅಪರಾಧಗಳಿಂದ ಜಾಗರೂಕರಾಗಿರಿ: ಯಾವುದೇ ಬ್ಯಾಂಕ್ ಅಥವಾ ಸರ್ಕಾರಿ ಸಂಸ್ಥೆಗಳು ದೂರವಾಣಿ ಕರೆ, SMS ಅಥವಾ ವೀಡಿಯೊ ಕರೆ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕ್ ಖಾತೆ ವಿವರಗಳು, OTP ಅಥವಾ ಪಾಸ್‌ವರ್ಡ್‌ಗಳನ್ನು ಕೇಳುವುದಿಲ್ಲ. ಇಂತಹ ಕರೆಗಳು ಬಂದಾಗ ತಕ್ಷಣವೇ ಸಂಪರ್ಕ ಕಡಿತಗೊಳಿಸಿ, ಯಾವುದೇ ಕಾರಣಕ್ಕೂ ಹಣ ವರ್ಗಾವಣೆ ಮಾಡಬೇಡಿ ಮತ್ತು ತಕ್ಷಣವೇ 1930 ಸಂಖ್ಯೆಗೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ದೂರು ದಾಖಲಿಸಿ ನಿಮ್ಮನ್ನು ಮತ್ತು ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಿಕೊಳ್ಳಿ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X