ಧಾರವಾಡ | ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಪತ್ತೆ!

Date:

Advertisements

ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಅಸ್ಥಿಪಂಜರ ಮೂರು ವರ್ಷದ ಬಳಿಕ ಆತನ ಮನೆಯಲ್ಲೇ ಪತ್ತೆಯಾದ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ.

ಅಸ್ಥಿಪಂಜರವಾಗಿ ಪತ್ತೆಯಾದ ವ್ಯಕ್ತಿಯನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಮೃತ ಚಂದ್ರಶೇಖರ್​ ಮೂರು‌ ವರ್ಷಗಳಿಂದ ನಾಪತ್ತೆಯಾಗಿದ್ದರು. ಆದರೆ ಮನೆಯಲ್ಲಿ ಮಲಗಿದ್ದಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಅಸ್ಥಿಪಂಜರ ಸಿಕ್ಕಿದೆ.

ಕಳೆದ ತಿಂಗಳು ಚಂದ್ರಶೇಖರ್​ ಕಾಣೆಯಾಗಿರುವ ಬಗ್ಗೆ ಧಾರವಾಡ ವಿದ್ಯಾಗಿರಿ ಠಾಣೆಯಲ್ಲಿ ವ್ಯಕ್ತಿಯೊಬ್ಬರು ದೂರು ಕೊಟ್ಟಿದ್ದರು. ಬಳಿಕ ಪೊಲೀಸ್​ ಚಂದ್ರಶೇಖರ್​ಗಾಗಿ ಎಲ್ಲೆಡೆ ಶೋಧ ನಡೆಸಿದ್ದರು.

ಪೊಲೀಸರು ಚಂದ್ರಶೇಖರ್ ಮನೆಗೆ ಹೋಗಿದ್ದಾಗ, ಅಸ್ಥಿಪಂಜರವಾಗಿ ಕಂಡುಬಂದಿದೆ. ಪತ್ನಿಯ ಸಾವಿನ ನಂತರ ಚಂದ್ರಶೇಖರ್ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಅದಾದ ಬಳಿಕ ಕೋವಿಡ್ ಬಂದಿತ್ತು. ಕೋವಿಡ್ ವೇಳೆ ಇವರು ಸಾವನ್ನಪ್ಪಿರುವ ಬಗ್ಗೆ ಶಂಕೆ ಮೂಡಿದೆ.

Advertisements
Bose Military School

ಮೃತ ವ್ಯಕ್ತಿಯ ಸಂಬಂಧಿಕರು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಹೀಗಾಗಿ ಯಾರೂ ಈ ಬಗ್ಗೆ ಮಾಹಿತಿ ಪಡೆದಿರಲಿಲ್ಲ. ಸದ್ಯ ಅಸ್ಥಿಪಂಜರ ವಶಕ್ಕೆ ಪಡೆದಿರುವ ಪೊಲೀಸರು, ಮುಂದಿನ ಕ್ರಮ ಜರುಗಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ʼಬಯಲು ಸೀಮೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿʼ

ಸುಮಾರು ವರ್ಷಗಳಿಂದ ಬಯಲು ಸೀಮೆ ಜಿಲ್ಲೆಗಳಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ಹೋರಾಟ...

ಉಡುಪಿ | ಜಗತ್ತಿನಾದ್ಯಂತ ಪ್ರತೀ ವರ್ಷ ನೂರಾರು ಮುದ್ರಣ ಪತ್ರಿಕೆಗಳು ಮುಚ್ಚಿಕೊಳ್ಳುತ್ತಿವೆ – ರಾಜಾರಾಂ ತಲ್ಲೂರು

ಕೃತಕ ಬುದ್ದಿಮತ್ತೆ ಸುದ್ದಿಮನೆಯ ಒಳಗೆ ಪ್ರವೇಶಿಸಿದರೆ, ಭಾಷಾಂತರ, ಸುದ್ದಿ, ಸಾರಾಂಶ, ವಿವಿಧ...

ಹಾವೇರಿ | ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕು ತಹಶೀಲ್ದಾರ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಡಾ....

Download Eedina App Android / iOS

X