ರಾಯಚೂರು | ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆಗೆ ಹೆಚ್ಚು ಆದ್ಯತೆ ನೀಡಬೇಕು : ಜನಾರ್ದನ ಹಳ್ಳಿಬೆಂಚಿ

Date:

“ಜಗತ್ತನ್ನು ಜ್ಞಾನ ಸಂಪತ್ತು ಇಂದು ಆಳುತ್ತಿದೆ. ಸಂಘಟಿಸುವ ಇತರೆ ಸಂಪತ್ತುಗಳಿಗಿಂತ ಜ್ಞಾನ ಬಹಳ ಮುಖ್ಯವಾಗಿದೆ. ಹಾಗಾಗಿ, ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆ ಹೆಚ್ಚು ಆದ್ಯತೆ ನೀಡಬೇಕು” ಎಂದು ಸ್ಲಂ ಜನಾಂದೋಲನ ಕರ್ನಾಟಕ ವೇದಿಕೆಯ ಜನಾರ್ದನ ಹಳ್ಳಿಬೆಂಚಿ ಹೇಳಿದರು.

- Advertisement -

ರಾಯಚೂರು ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಸ್ಲಂ ಜನಾಂದೋಲನ ಕರ್ನಾಟಕ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ 2023-24 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಸ್ಲಂ ನಿವಾಸಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕಳೆದ 12 ವರ್ಷಗಳಿಂದ ನಿರಂತರವಾಗಿ ಪ್ರತಿಭಾನ್ವಿತ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ಸ್ಲಂ ವಿದ್ಯಾರ್ಥಿಗಳು ಯಾವುದೇ ರೀತಿಯ ಮೂಲಭೂತ ಸೌಕರ್ಯವಿಲ್ಲದಿದ್ದರೂ ಹೆಚ್ಚು ಅಂಕಗಳನ್ನು ಪಡೆಯಲು ಪ್ರೋತ್ಸಾಹಿಸಿದ್ದೇವೆ . ವಂಚಿತ ಸಮುದಾಯದಲ್ಲಿ ಶಿಕ್ಷಣದ ಜಾಗೃತಿ ಹೆಚ್ಚಾಗದೆ ಇದಕ್ಕೆ ಪೋಷಕರು ಸಹ ಕಾರಣೀಕರ್ತರಾಗಿದ್ದಾರೆ ಎಂದರು.

ಸ್ಲಂ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಮುಂದಾಗುತ್ತಿಲ್ಲ. ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಯಿಂದಲೇ ದೊಡ್ಡ ಕನಸು ನುಚ್ಚು ನೂರಾಗುತ್ತಿದೆ. ನಮ್ಮ ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನಕ್ಕೆ ಜಾತಿ, ಬಡತನ ಹಾಗೂ ಸ್ಲಂ ಜನರು ಎಂದು ಕಳಂಕ ಅಡ್ಡಿಯಾಗುತ್ತಿದೆ. ಈ ಚಿಂತನೆಯಿಂದ ಮಕ್ಕಳು ಹೊರಬರಬೇಕು ಎಂಬ ಉದ್ದೇಶಕ್ಕೆ ಹಲವಾರು ಕಾರ್ಯಕ್ರಮಗಳನ್ನು ನಿರ್ವಹಿಸುತ್ತಾ ಸಾಗಿದ್ದೇವೆ ಎಂದು ಜನಾರ್ದನ ಹಳ್ಳಿಬೆಂಚಿ ತಿಳಿಸಿದರು.

ಮನಸ್ಸಿನಲ್ಲಿ ಕೀಳರಿಮೆಯನ್ನು ಮೊದಲು ಬಿಡಬೇಕು. ಇದರಿಂದ ನಾವು ಘನತೆಯ ಸ್ವಾಭಿಮಾನದ ಜೀವನ ನಡೆಸಬಹುದು. ನಮ್ಮ ವಿವೇಚನೆ ಶಿಕ್ಷಣದಿಂದ ಮಾತ್ರ ಸಾಧ್ಯ.ವಿದ್ಯಾರ್ಥಿಗಳು ಹೆಚ್ಚಾಗಿ ಹೊಸ ಆವಿಷ್ಕಾರಗಳ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ತುಮಕೂರು | ಒಟಿಎಸ್‌ಗೆ ಅವಕಾಶ ನೀಡದೆ ಟ್ರ್ಯಾಕ್ಟರ್ ಹರಾಜು : ಬ್ಯಾಂಕ್ ಕ್ರಮ ವಿರೋಧಿಸಿ ಆ. 12ಕ್ಕೆ ರೈತ ಸಂಘದಿಂದ ಪ್ರತಿಭಟನೆ

ಮುಖಂಡರುಗಳಾದ ನಗರಸಭೆ ಸದಸ್ಯ ಮಣಿಕಂಠ , ಖಾನಾಪುರ ಗ್ರಾಮ ಪಂಚಾಯತ್ ಸದಸ್ಯ ಶಾಲಂಸಾಬ ,ಅನಿಲ ಕುಮಾರ್ , ಯಮನಪ್ಪ , ಬಸವರಾಜ್ ಹೊಸೂರ , ಮಾಧವರೆಡ್ಡಿ, ಮಹೇಶ , ಚಂದ್ರು ,ಪ್ರವೀಣ , ಪವನ, ಎಸ್ ರಾಜು , ನಿತಿನ್ ,ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...