ಬಸವಕಲ್ಯಾಣ | ವಿದ್ಯಾರ್ಥಿಗಳು ಶಿಸ್ತು, ತಾಳ್ಮೆ ಮೈಗೂಡಿಸಿಕೊಳ್ಳಿ

Date:

Advertisements

ವಿದ್ಯಾರ್ಥಿಗಳು ಎಂದಿಗೂ ಶಿಸ್ತು, ತಾಳ್ಮೆ ಹಾಗೂ ವಿನಯ ಕಳೆದುಕೊಳ್ಳಬಾರದು, ಕಾಲೇಜಿನಲ್ಲಿ ಹೆಚ್ಚಿನ ಓದಿನ ಕಡೆಗೆ ಗಮನಹರಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಬಸವಕಲ್ಯಾಣ ಇಂಜಿನಿಯರಿಂಗ್‌ ಕಾಲೇಜಿನ ಅಧ್ಯಕ್ಷ ದೀಲಿಪಕುಮಾರ ಎಸ್. ತಾಳಂಪಳ್ಳಿ ಹೇಳಿದರು.

ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನಲ್ಲಿ, 2024-25ನೇ ಶೈಕ್ಷಣಿಕ ವರ್ಷದ ಬಿ.ಇ. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ʼವಿದ್ಯಾರ್ಥಿಗಳು ಪ್ರತಿನಿತ್ಯ ತಪ್ಪದೇ ತರಗತಿಗಳಿಗೆ ಹಾಜರಾಗಬೇಕು. ಬೋಧಕರೊಂದಿಗೆ ವಿನಯದಿಂದ ವರ್ತಿಸಿ ಅರ್ಥವಾಗದ ವಿಷಯಗಳನ್ನು ತಿಳಿದುಕೊಳ್ಳಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹಾಗೂ ಎಲ್ಲ ರೀತಿಯ ಪುಸ್ತಕಗಳನ್ನು ಅಧ್ಯಯನ ನಡೆಸಿ ಪ್ರಜ್ಞಾವಂತ ನಾಗರಿಕರಾಗಿ ಬೆಳೆದು ನಮ್ಮ ಸಂಸ್ಥೆಗೆ ಕೀರ್ತಿ ತರಬೇಕುʼ ಎಂದು ಹಾರೈಸಿದರು.

Advertisements

ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ ಮಾತನಾಡಿ, ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಜೀವನದ ಗುರಿ ತಲುಪಬೇಕು. ಉಜ್ವಲ ಭವಿಷ್ಯ ಕುರಿತು ಕಠಿಣ ಅಧ್ಯಯನದ ನಡೆಸಲು ಯೋಚಿಸಬೇಕು. ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಮಾತ್ರ ಸಾಧನೆಯ ಶಿಖರ ತಲುಪಬಹುದುʼ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಬಿಇಟಿ ಸಮೂಹ ಸಂಸ್ಥೆಯ ಬಸವಕಲ್ಯಾಣ ಇಂಜಿನೀಯರಿಂಗ್ ಕಾಲೇಜಿನ ಉಪಪ್ರಾಚಾರ್ಯರು ಡಾ.ಅರುಣಕುಮಾರ ಎಲಾಲ ಹಾಗೂ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಚಾರ್ಯರು ಉಪನ್ಯಾಸಕರಾದ ಡಾ.ನಾಗಯ್ಯಾ ಸ್ವಾಮಿ, ವಿಶ್ವನಾಥಯ್ಯಾ ಸ್ವಾಮಿ, ನೀಲಕಂಠ ಕೋಡ್ಲೆ, ಶಿವಕುಮಾರ ಸ್ವಾಮಿ ಹಾಗೂ ಕುಲಸಚಿವ ಪ್ರೇಮಸಾಗರ ಪಾಟೀಲ ಸೇರಿದಂತೆ ಸಿಬ್ಬಂದಿಗಳಾದ ವೃಷೀಕೇತ ಭೂಸಾರೆ, ಸುಭಾಷ ಚಂದ್ರಯ್ಯ ಮತ್ತು ಎಲ್ಲಾ ವಿಭಾಗ ಮುಖ್ಯಸ್ಥರು, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಹೃದಯಾಘಾತ : ಕರ್ತವ್ಯ ನಿರತ ಪೊಲೀಸ್ ಪೇದೆ ಸಾವು

ಕಾರ್ಯಕ್ರಮವನ್ನು ಡಾ.ಅರುಣಕುಮಾರ ಎಲಾಲ್ ಸ್ವಾಗತಿಸಿದರು, ವಿದ್ಯಾಸಾಗರ ನಿರೂಪಿಸಿದರು. ರೇವಣಸಿದ್ದಪ್ಪಾ ಡಿಗ್ಗಿಕರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X