ಕಲಬುರಗಿ | ಮಾವನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಅಳಿಯ

Date:

Advertisements

ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ ಗ್ರಾಮದ ಈರಪ್ಪ ಶರಣಪ್ಪ (60) ಕೊಲೆಯಾದ ದುರ್ದೈವಿ. ಆತ್ಮಹತ್ಯೆ ಮಾಡಿಕೊಂಡ ಅಳಿಯ ಗೋರಖನಾಥ ಗಾಯಕವಾಡ (32) ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದ ಮೂಲದ ಗೋರಖನಾಥ ಹೆಂಡತಿಗೆ ಕರೆದುಕೊಂಡು ಹೋಗಲು ಚಿಂತಪಳ್ಳಿ ಗ್ರಾಮಕ್ಕೆ ಬಂದಿದ್ದಾನೆ. ದೀಪಾವಳಿ ನಂತರ ಕರೆದುಕೊಂಡು ಹೋಗುವಂತೆ ಮಾವ ತಿಳಿಸಿದ್ದಾರೆ. ಇದಕ್ಕೆ ಕೋಪಗೊಂಡ ಅಳಿಯ ಪತ್ನಿ ಹಾಗೂ ಮಾವನೊಂದಿಗೆ ಜಗಳವಾಡಿದ್ದಾನೆ.

Advertisements

ಹೊಲಕ್ಕೆ ಹೋಗಿದ್ದ ಮಾವನ ಹಿಂದೆ ಹೋದ ಅಳಿಯ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ. ಅಲ್ಲಿಂದ ಊರಿಗೆ ಬಂದ ಅಳಿಯ ಗೋರಖನಾಥ ಉದ್ದೇಶಪೂರ್ವಕವಾಗಿ ವಿದ್ಯುತ್‌ ತಂತಿ ಹಿಡಿದುಕೊಂಡಿದ್ದಾನೆ. ಪರಿಣಾಮ ವಿದ್ಯುತ್‌ ತಗುಲಿ ಕಟ್ಟಡದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶರವೇಗದಲ್ಲಿ ಸಾವಿನತ್ತ ಧಾವಿಸಿದೆ RTI!

“ಆರು ತಿಂಗಳ ಹಿಂದೆ ಮದುವೆಯಾದ ಗೋರಖನಾಥ ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದನು, ಈ ಕಾರಣಕ್ಕೆ ಪತ್ನಿ ತವರು ಮನೆಗೆ ಬಂದಿದ್ದಳು. ಮತ್ತೆ ಕರೆಯಲು ಬಂದ ಅಳಿಯ ಗೋರಖನಾಥ ಮಾವನಿಗೆ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ಸುಲೇಪೇಟ್ ಪೊಲೀಸ್‌ ಠಾಣೆ ಪಿಎಸ್‌ ಐ ನಂದಿನಿ ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X