ಸೊರಬ | ಆಯುಧಗಳನ್ನು ಜವಾಬ್ದಾರಿಯುತವಾಗಿ ಬಳಕೆ ಮಾಡಿ: ಸಚಿವ ಮಧು ಬಂಗಾರಪ್ಪ

Date:

ಆಯುಧಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಕೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

- Advertisement -

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೊರಬದಲ್ಲಿ ಫೆ.01ರಿಂದ 10 ರವರೆಗೆ ಆಯೋಜಿಸಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಸೊರಬ ಪ್ರದೇಶದಲ್ಲಿ ಈ ರೀತಿಯ ಕಾರ್ಯಕ್ರಮ ಆಯೋಜನೆ ಮಾಡಿರುವುದು ಹೆಮ್ಮೆಯ ವಿಚಾರವಾಗಿದೆ. ತರಬೇತಿ ಮುಗಿದ ನಂತರ ತರಬೇತಿ ಪಡೆದವರ ಜವಾಬ್ದಾರಿಗಳು ಹೆಚ್ಚಾಗಿದ್ದು, ಪೊಲೀಸ್ ಇಲಾಖೆಯ ರೀತಿಯೇ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕಿರುತ್ತದೆ. ತರಬೇತಿಯಲ್ಲಿ ಹೇಳಿಕೊಟ್ಟ ಶಿಸ್ತನ್ನು ಜೀವನದ ಪ್ರತಿ ಹಂತದಲ್ಲೂ ಪಾಲನೆ ಮಾಡಬೇಕು. ಆಯುಧ ಪರವಾನಿಗೆಯನ್ನು ಪಡೆದು ಆಯುಧಗಳನ್ನು ಖರೀದಿ ಮಾಡಿದರಷ್ಟೇ ಸಾಲದು. ಬದಲಿಗೆ ಆಯುಧಗಳನ್ನು ಬಳಕೆ ಮಾಡುವ ಸ್ಥಳ, ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಸುರಕ್ಷಿತವಾಗಿ ಒಳ್ಳೆಯ ಕಾರ್ಯಗಳಿಗೆ ಮಾತ್ರ ಬಳಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಮಾತನಾಡಿ, “ಜನಸಾಮಾನ್ಯರಿಗೆ ಅವರ ಮೇಲೆ ಆಗುವ ಯಾವುದೇ ಅಹಿತಕರ ಘಟನೆಗಳನ್ನು ಎದುರಿಬೇಕು ಎಂದರೆ ಅವರಲ್ಲಿ ಆತ್ಮ ಸ್ಥೈರ್ಯ ಎಂಬುದು ಮುಖ್ಯವಾಗಿರುತ್ತದೆ. ತರಬೇತಿ ಮುಕ್ತಾಯವಾದ ನಂತರ ಆಯುಧಗಳನ್ನು ಬಳಕೆ ಮಾಡಬೇಕಾದ ಸಂದರ್ಭ ಬಂದೊದಗಿದಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಆಯುಧಗಳನ್ನು ಬಳಸದೆ, ಸಮಾಜದ ಜವಾಬ್ದಾರಿಯುತ ಪ್ರಜ್ಞಾವಂತ ಪ್ರಜೆಯಾಗಿ ಶಿಸ್ತುಬದ್ಧ ಜೀವನ ನಡೆಸಬೇಕು” ಎಂದು ತಿಳಿ ಹೇಳಿದರು.

WhatsApp Image 2025 02 13 at 7.48.56 PM

ಶಿವಮೊಗ್ಗ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ. ಕೆ. ಮಾತನಾಡಿ, “ಅಧಿಕಾರದ ಜೊತೆಗೆ ಹೊಣೆಗಾರಿಕೆಯೂ ಬರುತ್ತದೆ. ಅದೇ ರೀತಿ ಅಧಿಕಾರ ಹೆಚ್ಚಾದಂತೆ ಹೊಣೆಗಾರಿಕೆಯೂ ಸಹಾ ಹೆಚ್ಚುತ್ತದೆ. ಆಯುಧಗಳನ್ನು ಕುಟುಂಬ, ಆಸ್ತಿಯ ರಕ್ಷಣೆಗಾಗಿ ಮಾತ್ರ ಬಳಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಕೂಡದು. ಒಂದು ವೇಳೆ ಬಳಸಿದಲ್ಲಿ ಪರವಾನಿಗೆ ಇರುವ ಆಯುಧ ಇದ್ದರೂ ಸಹ ಅದು ಕಾನೂನು ರೀತ್ಯಾ ಅಪರಾಧವಾಗಿರುತ್ತದೆ. ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಸಿದರು.

ನಾಗರೀಕ ಬಂದೂಕು ತರಬೇತಿ ಶಿಬಿರದಲ್ಲಿ *ತರಬೇತಿ ಪೂರ್ಣಗೊಳಿಸಿದ ಒಟ್ಟು 200 ಜನ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ?: ಶಿವಮೊಗ್ಗ | ಸೊರಬದ ತಾವರೆಕೊಪ್ಪದಲ್ಲಿ ಸಂಭ್ರಮದಿಂದ ಜರುಗಿದ ಹೋರಿಹಬ್ಬ

ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೃಷ್ಣ ಮೂರ್ತಿ, ಶಿಕಾರಿಪುರ ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಕೇಶವ್, ರಾಜಶೇಖರ್ ಸಿಪಿಐ ಸೊರಬ ವೃತ್ತ ಮತ್ತು ನಾಗರಿಕ ಬಂದೂಕು ತರಬೇತಿ ಶಿಬಿರದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2025 02 13 at 7.48.56 PM 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...