- ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಮಾಹಿತಿ
- ಕದ್ರಿ ದೇವಸ್ಥಾನದಿಂದ ಬಯಲು ರಂಗ ಮಂದಿರದವರೆಗೆ ಪಾದಯಾತ್ರೆ
ಸೌಜನ್ಯ ಹೋರಾಟ ಸಮಿತಿ ಮಂಗಳೂರು ಇದರ ನೇತೃತ್ವದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆ.20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಹೋರಾಟದ ಸಂಚಾಲಕಿ ಪ್ರಸನ್ನ ರವಿ ತಿಳಿಸಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ನಿವಾಸಿ ಸೌಜನ್ಯ ಎಂಬ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಕೃತ್ಯ ನಡೆದು 11 ವರ್ಷಗಳು ಕಳೆದಿದೆ. ಆದರೂ ಇದರ ಹಿಂದಿರುವ ನೈಜ ಅತ್ಯಾಚಾರಿಗಳನ್ನು ಕಂಡು ಹಿಡಿಯಲು ಇದುವರೆಗೂ ನಮ್ಮ ಕಾನೂನು ವ್ಯವಸ್ಥೆಗೆ ಸಾಧ್ಯವಾಗಲಿಲ್ಲ. ಹೀಗಾಗಿ ಮತ್ತೊಮ್ಮೆ ಈ ಪ್ರಕರಣದ ಬಗ್ಗೆ ನ್ಯಾಯಾಂಗ ಮರುತನಿಖೆ ಮಾಡಿ ಸೌಜನ್ಯಳಿಗೆ ನ್ಯಾಯ ದೊರಕಿಸಿ ಕೊಡಲು ಒತ್ತಾಯಿಸುವುದು ಈ ಸಭೆಯ ಉದ್ದೇಶವಾಗಿದೆ ಎಂದರು.
ಇದನ್ನು ಓದಿದ್ದೀರಾ? ಮುಂಬೈ | ಆಕಸ್ಮಿಕವಾಗಿ ಪತ್ನಿಯನ್ನು ಸ್ಪರ್ಶಿಸಿದ ವ್ಯಕ್ತಿಗೆ ಬಾರಿಸಿದ ಪತಿ; ರೈಲ್ವೆ ಟ್ರ್ಯಾಕ್ಗೆ ಬಿದ್ದವ ಅಪ್ಪಚ್ಚಿ!
ಆ.20 ರ ಆದಿತ್ಯವಾರ ಸಂಜೆ 3.30ಕ್ಕೆ ಕದ್ರಿಯ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಬಯಲು ರಂಗ ಮಂದಿರದವರೆಗೆ ಪಾದಯಾತ್ರೆಯ ಮೂಲಕ ಹೊರಟು ಪ್ರತಿಭಟನಾ ಸಭೆ ನಡೆಯಲಿದೆ.
ಸಭೆಯನ್ನುದ್ದೇಶಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಳ ತಾಯಿ ಕುಸುಮಾವತಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೌಜನ್ಯ ಹೋರಾಟ ಸಮಿತಿಯ ಸದಸ್ಯರಾದ ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ, ವಿಖ್ಯಾತ್ ಉಳ್ಳಾಲ್ ಉಪಸ್ಥಿತರಿದ್ದರು.