ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ; ಸಿಎಂಗೆ ಸೌಜನ್ಯ ಕುಟುಂಬ ಒತ್ತಾಯ

Date:

Advertisements

ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸೌಜನ್ಯ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಬುಧವಾರ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ತಿಮರೋಡಿ ಮತ್ತು ಸೌಜನ್ಯ ಕುಟುಂಬ, “ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಮಾಯನನ್ನು ಬಂಧಿಸಿ, ಪ್ರಕರಣದ ದಿಕ್ಕು ತಪ್ಪಿಸಲಾಗಿತ್ತು. ಇದೀಗ, ಆತ ನಿರ್ದೋಷಿಯೆಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ. ಹಾಗಿದ್ದ ಮೇಲೆ, ನೈಜ ಅಪರಾಧಿಗಳನ್ನು ಬಂಧಿಸಬೇಕು. ಶಿಕ್ಷೆ ವಿಧಿಸಬೇಕು. ಅದಕ್ಕಾಗಿ, ಪ್ರಕರಣವನ್ನು ಮರು ತನಿಖೆಗೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

2012ರ ಅಕ್ಟೋಬರ್ 9ರಂದು ಉಜಿರೆಯಲ್ಲಿ ಕಾಲೇಜು ಮುಗಿಸಿ, ಧರ್ಮಸ್ಥಳದಲ್ಲಿದ್ದ ತಮ್ಮ ಮನೆಗೆ ಸೌಜನ್ಯ ತೆರಳುತ್ತಿದ್ದಾಗ ಆಕೆಯನ್ನು ಅಪಹರಿಸಲಾಗಿತ್ತು. ಅಕ್ಟೋಬರ್ 10ರಂದು ಆಕೆ ನಾಪತ್ತೆಯಾಗಿದ್ದ ಸ್ಥಳದಿಂದ ಕೇವಲ 20 ಮೀಟರ್ ದೂರದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಕೃತ್ಯ ಎಸಗಿದವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಹಲವಾರು ಪ್ರತಿಭಟನೆಗಳು ನಡೆದಿದ್ದವು.

Advertisements

ಈ ಸುದ್ದಿ ಓದಿದ್ದೀರಾ?: ತುಮಕೂರು | ಹೃದಯ ವಿದ್ರಾವಕ ಘಟನೆ; ಸೂತಕದ ಮೌಢ್ಯಕ್ಕೆ ಹಸುಗೂಸು ಬಲಿ

ಪ್ರತಿಭಟನೆಯ ಕಾವು ಹೆಚ್ಚಾದಂತೆ, ಆರೋಪಿಗಳನ್ನು ಬಂಧಿಸಬೇಕಾದ ಸಂಕಷ್ಟಕ್ಕೆ ಪೊಲೀಸರು ಸಿಲುಕಿದ್ದರು. ಆಗ ಧರ್ಮಸ್ಥಳದ ಬಾಹುಬಲಿ ಬೆಟ್ಟದ ಮೆಟ್ಟಿಲುಗಳ ಮೇಲೆ ಕುಳಿತಿದ್ದ ಅಮಾಯಕ ಸಂತೋಷ್‌ ರಾವ್‌ನನ್ನು ಮೂವರು ಜೈನ್‌ಗಳು ಹಿಡಿದು, ಆತನ ಆರೋಪಿಯೆಂದು ಬೊಬ್ಬೆ ಹೊಡೆದು ಪೊಲೀಸರಿಗೆ ಒಪ್ಪಿಸಿದ್ದರು. ತಾನೇ ಕೃತ್ಯ ಎಸಗಿದ್ದು ಎಂದು ಒಪ್ಪಿಕೊಳ್ಳುವಂತೆ ಸಂತೋಷ್‌ಗೆ ಪೊಲೀಸರು ಹಿಂಸೆ ನೀಡಿದ್ದರು.

ಇದೀಗ, ಸಂತೋಷ್ ರಾವ್ ನಿರಪರಾಧಿಯೆಂದು ಸಿಬಿಐ ಕೋರ್ಟ್‌ ಘೋಷಿಸಿದೆ. ಈ ಬೆನ್ನಲ್ಲೇ ಸೌಜನ್ಯ ಪರ ಹೋರಾಟ ಮತ್ತೆ ಭುಗಿಲೆದ್ದಿದೆ. ರಾಜ್ಯದ್ಯಂತ ಹೋರಾಟಗಳು ನಡೆಯುತ್ತಿವೆ. ನೈಜ ಅರೋಪಿಗಳನ್ನು ಬಂಧಿಸಿ, ಶಿಕ್ಷೆಗೆ ಒಳಪಡಿಸಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X