ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

Date:

Advertisements

ಧರ್ಮಸ್ಥಳದ ಸೌಜ್ಯನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ಪೊಲೀಸರು ಬಂಧಿಸಿದ್ದ ಸಂತೋಷ್‌ ರಾವ್‌ ಅವರನ್ನು ನಿರ್ದೋಷಿಯೆಂದು ಘೋಷಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೆಟ್ಟಿಲೇರಿದೆ. ವಿಶೇಷ ನ್ಯಾಯಾಲಯದ ತೀರ್ಪನ್ನು ಮರುಪರಿಶಿಲನೆ ನಡೆಸುವಂತೆ ಮೇಲ್ಮನವಿ ಸಲ್ಲಿಸಿದೆ.

2012ರ ಅಕ್ಟೋಬರ್ 10ರಂದು ಉಜಿರೆಯಲ್ಲಿ ಕಾಲೇಜು ಮುಗಿಸಿಕೊಂಡು ಧರ್ಮಸ್ಥಳದಲ್ಲಿ ತನ್ನ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಸೌಜನ್ಯಾಳನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಸಂತೋಷ್ ರಾವ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಾಗಿತ್ತು. ತನಿಖೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು. 11 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಸಂತೋಷ್ ರಾವ್ ನಿರಪರಾಧಿ ಎಂದು ಘೋಷಿಸಿ, ಬಿಡುಗಡೆ ಮಾಡಿತ್ತು.

ಆ ಬಳಿಕ, ನಿಜವಾದ ಅಪರಾಧಿಗಳನ್ನು ಬಂಧಿಸಿ, ಶಿಕ್ಷೆ ವಿಧಿಸಬೇಕು. ಪ್ರಕರಣವನ್ನು ಮರುತನಿಖೆ ನಡೆಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದೆ.

Advertisements

ಅವಧಿ ಮುಗಿದ ಮೇಲೆ ಮೇಲ್ಮನವಿ ಸಲ್ಲಿಸಿರುವ ಸಿಬಿಐ
2023ರ ಜುಲೈ 16ರಂದು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯವು, ತನ್ನ ತೀರ್ಪಿನ ವಿರುದ್ಧ 60 ದಿನಗಳ ಒಳಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ, ತೀರ್ಪು ಬಂದು ಈಗಾಗಲೇ 120 ದಿನಗಳು ಕಳೆದು ಹೋಗಿವೆ. ಈಗ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಸಂತೋಷ್ ರಾವ್ ಅವರೇ ನಿಜವಾದ ಆರೋಪಿ ಎಂದು ಮೇಲ್ಮನವಿಯಲ್ಲಿ ಸಿಬಿಐ ವಾದಿಸಿದೆ.

ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಸೌಜನ್ಯ ಪರ ಹೋರಾಟಗಳು ಭುಗಿಲೆದ್ದಿವೆ. ಸಂತೋಷ್ ರಾವ್ ನಿರಪರಾಧಿ ಎಂಬುದು ಮೊದಲೇ ಖಾತ್ರಿಯಾಗಿತ್ತು. ಆದರೆ, ನಿಜವಾದ ಅಪರಾಧಿಗಳು ಧರ್ಮಸ್ಥಳದಲ್ಲಿಯೇ ಇದ್ದಾರೆ, ಅವರನ್ನು ಬಂಧಿಸಬೇಕು ಎಂದು ಒತ್ತಾಯಗಳು ಕೇಳಿಬಂದಿವೆ. ಸೌಜನ್ಯ ಕುಟುಂಬಸ್ಥರೂ ಕೂಡ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರ ಸೋದರ ಸಂಬಂಧ ಸೇರಿದಂತೆ ನಾಲ್ವರ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ. ಆ ನಾಲ್ವರನ್ನೂ ಬಂಧಿಸಿ, ವಿಚಾರಣೆ ಒಳಪಡಿಸಬೇಕು ಎಂದು ಹೇಳುತ್ತಿದ್ದಾರೆ. ಆದರೆ, ಇದುವರೆಗೂ ಅವರನ್ನು ವಿಚಾರಣೆಗೆ ಒಳಪಡಿಸಲಾಗಿಲ್ಲ ಎಂದು ಸೌಜನ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ನಡುವೆ, ಪ್ರಕರಣವನ್ನು ಮರು ತನಿಖೆ ನಡೆಸಲು ಸೂಚನೆ ನೀಡಬೇಕೆಂದು ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X