ಹಾಸನ ವಿಧಾನಸಭಾ ಕ್ಷೇತ್ರದಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ದಿವಂಗತ ಎಚ್.ಎಸ್ ಪ್ರಕಾಶ್ ಅವರ ಪುತ್ರ ಎಚ್.ಪಿ ಸ್ವರೂಪ್ ಮಂಗಳವಾರ ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಎಚ್.ಪಿ ಸ್ವರೂಪ್ ಗೆಲುವಿಗಾಗಿ ಪ್ರಾರ್ಥಿಸಿದ್ದ ಅಭಿಮಾನಿಗಳು ಸಾವಿರದ ಒಂದು (1001) ತೆಂಗಿನಕಾಯಿಗಳನ್ನು ಆಂಜನೇಯನಿಗೆ ಈಡುಗಾಯಿ ಹಾಕುವ ಮೂಲಕ ಹರಿಕೆ ತೀರಿಸಿದರು.
ಹಾಸನ ವಿಧಾನಸಭಾ ಕ್ಷೇತ್ರವೂ ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ ಗಮನ ಸೆಳೆದಿತ್ತು. ಬಿಜೆಪಿಯ ಶಾಸಕ ಪ್ರೀತಂ ಗೌಡ ವಿರುದ್ಧ ಎಚ್.ಪಿ ಸ್ವರೂಪ್ 9 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದರು.
ಈ ಸುದ್ದಿ ಓದಿದ್ದೀರಾ? ಹಾಸನ | ನನ್ನ ವಿರುದ್ಧದ ಸುಳ್ಳು ಮಾಹಿತಿಯಿಂದ ಮತಗಳ ಅಂತರ ಕುಸಿದಿದೆ: ರೇವಣ್ಣ