ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರವನ್ನು ಆರಂಭಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಹೇಳಿದರು.
ಸಂಸದ ಕ್ಯಾ ಬ್ರಿಜೇಶ್ ಚೌಟಾ ಮೇರೆಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ವಿಶೇಷ ರೈಲುಗಳನ್ನು ಘೋಷಿಸಿದ್ದು, ಚೌತಿಯ ಮುನ್ನಾದಿನದಂದು ಜನರು ತಮ್ಮ ತಮ್ಮ ಊರಿಗೆ ತೆರಳಲು ಅನುಕೂಲವಾಗುವಂತೆ ಪ್ರಯಾಣಿಕರಿಗಾಗಿ ಎರಡು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ
ಹಬ್ಬದ ಸಂದರ್ಭದಲ್ಲಿ ಜನರು ತಮ್ಮ ಕುಟುಂಬದೊಂದಿಗೆ ಸೇರಿಕೊಂಡು ಗಣೇಶ ಚತುರ್ಥ ಆಚರಿಸಿಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಿಕೊಟ್ಟ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವಿ ಮತ್ತು ವಿ. ಸೋಮಣ್ಣ ಅವರಿಗೆ ಸಂಸದ ಕ್ಯಾ ಬ್ರಿಜೇಶ್ ಚೌಟಾ ರವರಯ ಕೃತಜ್ಞತೆಗೆ ತಿಳಿಸಿದ್ದಾರೆ.
