ಶ್ರೀನಿವಾಸಪುರ | ಸರ್ಕಾರಿ ಉರ್ದು ಶಾಲೆಯನ್ನು ಉನ್ನತೀಕರಣಗೊಳಿಸಿ: ವಿದ್ಯಾರ್ಥಿಗಳ ಪೋಷಕರ ಆಗ್ರಹ

Date:

Advertisements

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿನ ಡಾ. ಜಾಕಿರ್ ಹುಸೇನ್ ಮೊಹಲ್ಲಾ ಪ್ರದೇಶದಲ್ಲಿರುವ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯನ್ನು ಮೌಲಾನಾ ಆಜಾದ್ ಮಾದರಿ ಶಾಲೆಯಾಗಿ ಉನ್ನತೀಕರಿಸಬೇಕು ಎಂದು ಸ್ಥಳೀಯ ಪೋಷಕರು, ಸಮುದಾಯದ ಮುಖಂಡರು ಹಾಗೂ ವಿದ್ಯಾಭಿವೃದ್ಧಿ ಹಿತಚಿಂತಕರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಸದಸ್ಯರಾದ ಶಬ್ಬೀರ್ ಅಹ್ಮದ್ ಅವರು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯಕ್ಕೆ ಮನವಿ ಸಲ್ಲಿಸಿದ್ದು, ತ್ವರಿತ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಈ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದಲ್ಲಿ ಈಗಾಗಲೇ 213 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಆದರೆ ಈ ಶಾಲೆಯಲ್ಲಿ ಕೇವಲ 5 ಸರ್ಕಾರಿ ಶಿಕ್ಷಕರು ಮತ್ತು ಓರ್ವ ಅತಿಥಿ ಶಿಕ್ಷಕ ಮಾತ್ರ ಇದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರಿಲ್ಲ. ಇದರಿಂದಾಗಿ ಪಾಠದ ಗುಣಮಟ್ಟ ಮತ್ತು ಮಕ್ಕಳ ವೈಯಕ್ತಿಕ ಬೆಳವಣಿಗೆಗೆ ತೊಂದರೆಯಾಗಿದೆ ಎಂದು ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

Advertisements

ಅಲ್ಲದೇ, ಈ ಶಾಲೆಯಲ್ಲಿ 3 ಮಾತ್ರ ಬೋಧನಾ ಕೊಠಡಿಗಳು ಮತ್ತು ಒಂದು ಅಡುಗೆ ಕೋಣೆ ಮಾತ್ರ ಇವೆ. ಶಾಲೆಗೆ ಸಂಬಂಧಿಸಿದ ಪರಿಶೀಲನಾ ದಾಖಲೆ ಪ್ರಕಾರ, ಗಂಡು ಮಕ್ಕಳಿಗೆ ಎರಡು ಮತ್ತು ಹೆಣ್ಣು ಮಕ್ಕಳಿಗೆ ಎರಡೇ ಶೌಚಾಲಯಗಳಿವೆ. ಈ ಸೌಲಭ್ಯಗಳು ಮಕ್ಕಳಿಗೆ ಸಾಕಾಗುತ್ತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ಈ ಶಾಲೆಯ 213 ವಿದ್ಯಾರ್ಥಿಗಳಿದ್ದು, ಈ ಪೈಕಿ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದಿಂದ ಬಂದವರು. ಶಾಲೆಯು ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಪ್ರಮುಖ ಆಧಾರವಾಗಿದ್ದು, ಬಹುಮಟ್ಟಿಗೆ ಪೋಷಕರು ತಮ್ಮ ಮಕ್ಕಳ ಭವಿಷ್ಯವನ್ನು ಈ ಶಾಲೆಯ ಮೂಲಕ ರೂಪಿಸುತ್ತಿದ್ದಾರೆ.

ಈ ಶಾಲೆಯನ್ನು ಮೌಲಾನಾ ಆಜಾದ್ ಮಾದರಿ ಶಾಲೆಯಾಗಿ ಘೋಷಿಸಿದರೆ ಅಧ್ಯಾಪಕರ ಸಂಖ್ಯೆ ಹೆಚ್ಚಿಸಿ ಗುಣಮಟ್ಟದ ಪಾಠ ನೀಡಲು ಸಾಧ್ಯವಾಗುತ್ತದೆ. ಕೊಠಡಿಗಳು, ಶೌಚಾಲಯಗಳು, ಪೀಠೋಪಕರಣಗಳು, ಆಟದ ಸಾಮಗ್ರಿಗಳು ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳು ಸಿಗಬಹುದು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಶಾಲೆಯು ಮಾದರಿ ಶಾಲೆಯಾಗಿ ಪರಿವರ್ತಿತವಾದರೆ ನಮ್ಮ ಮಕ್ಕಳು ದೂರದ ಶಾಲೆಗಳಿಗೆ ಹೋಗಬೇಕಾಗುವುದಿಲ್ಲ. ನಮ್ಮ ಊರಿನಲ್ಲಿಯೇ ಉತ್ತಮ ಶಿಕ್ಷಣ ಸಿಗಲಿದೆ ಎಂದು ಪಾಲಕರು ತಮ್ಮ ಭಾವನೆ ಹಂಚಿಕೊಂಡಿದ್ದಾರೆ.

shabeer ahmed
ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಸದಸ್ಯರಾದ ಶಬ್ಬೀರ್ ಅಹ್ಮದ್

ಈ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಲು ಮತ್ತು ಸರ್ಕಾರಿ ಉದ್ದೇಶಿತ ‘ಮೌಲಾನಾ ಆಜಾದ್ ಮಾದರಿ ಶಾಲೆಗಳ’ ಉದ್ದೇಶ ಸಫಲವಾಗಿಸಲು ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಶಬ್ಬೀರ್ ಅಹ್ಮದ್ ತಮ್ಮ ಮನವಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯಕ್ಕೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ಈ ಪ್ರಸ್ತಾಪ ಪ್ರಧಾನಮಂತ್ರಿ ಹೊಸ 15 ಅಂಶಗಳ ಕಾರ್ಯಕ್ರಮದ ಅಡಿಯಲ್ಲಿ ಬರುವ ಯೋಜನೆಗಳ ಒಂದು ಭಾಗವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಸಕಾರಾತ್ಮಕ ಶೈಕ್ಷಣಿಕ ಉನ್ನತಿಯತ್ತ ಹೆಜ್ಜೆ ಇಡಲಿದೆ ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X