ಶ್ರೀರಂಗಪಟ್ಟಣ | ಗ್ಯಾಸ್ ಏಜೆನ್ಸಿಯಿಂದ ಹೆಚ್ಚುವರಿ ಹಣ ವಸೂಲಿ, ಡೋರ್ ಡೆಲಿವರಿ ನಿರಾಕರಣೆ : ಗ್ರಾಹಕರ ಆರೋಪ

Date:

Advertisements

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಅಶೋಕ್ ಗ್ಯಾಸ್ ಏಜೆನ್ಸಿಯವರು ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದಲ್ಲದೇ, ಡೋರ್ ಡೆಲಿವರಿ ಮಾಡಲು ನಿರಾಕರಣೆ ಮಾಡುತ್ತಿರುವುದಾಗಿ ಗ್ರಾಹಕರು ದೂರಿದ್ದಾರೆ.

ಅಶೋಕ್ ಗ್ಯಾಸ್ ಏಜೆನ್ಸಿಯವರ ಆಟಾಟೋಪ ಹೆಚ್ಚಾಗಿದೆ. ಡೋರ್ ಡೆಲಿವರಿ ಕೊಡುವುದಿಲ್ಲ. 45 ರೂ ಹೆಚ್ಚುವರಿ ಹಣ ವಸೂಲಿ ಮಾಡುತ್ತಾರೆ. ನಾವು ಊರ ಮುಂದಿನಿಂದ ಇನ್ನೊಂದು ಗಾಡಿಯಲ್ಲಿ ಇಲ್ಲವೇ ಹೆಗಲ ಮೇಲೆ ಹೊತ್ತುಕೊಂಡು ಮನೆಗೆ ಹೋಗಬೇಕು ಎಂದು ಚಿನ್ನಾಯಕನಹಳ್ಳಿ ಆಟೋ ಚಂದ್ರು ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿನ್ನನಾಯಕನಹಳ್ಳಿ ಊರಿಗೆ ಡೆಲಿವರಿ ಕೊಡುವ ಗ್ಯಾಸ್ ಏಜೆನ್ಸಿಯ ಡ್ರೈವರ್ ಮಾತನಾಡಿ, ಏಜೆನ್ಸಿಯ ನಿರ್ದೇಶನದಂತೆ ಹೆಚ್ಚುವರಿ ಹಣ ಪಡೆದಿರುತ್ತೇನೆ. ಏಜೆನ್ಸಿ ಕೊಡುವ ಬಾಡಿಗೆ ಹಣ ಸಾಲುವುದಿಲ್ಲ ಆದ್ದರಿಂದ ಗ್ರಾಹಕರ ಬಳಿ ಹೆಚ್ಚುವರಿ ಹಣ ಪಡೆದಿದ್ದೇನೆ. ಬಂದು ಗ್ಯಾಸ್ ಏಜೆನ್ಸಿಯ ಕಚೇರಿಯಲ್ಲಿ ದೂರು ಕೊಡಲಿ ಅವರು ತೀರ್ಮಾನ ಮಾಡಿದಂತೆ ನಡೆಯುತ್ತೇನೆ ಎಂದು ಹೇಳಿದರು.

Advertisements

ಅಶೋಕ್ ಗ್ಯಾಸ್ ಏಜೆನ್ಸಿಯ ಕಚೇರಿಗೆ ಫೋನ್ ಮಾಡಿ ಮಾತನಾಡಿದಾಗ, ಒಂದು ಊರಿನಲ್ಲಿ ನಿಗದಿ ಮಾಡಿದ ಜಾಗಕ್ಕೆ ಮಾತ್ರ ಡೆಲಿವರಿ ಕೊಡುತ್ತೇವೆ. ಯಾವ ಗ್ರಾಹಕರಿಗೆ ತೊಂದರೆಯಾಗುತ್ತಿದೆಯೋ ಅವರಿಗೆ ಬೇಡ ಅನ್ನಿಸುವುದಾದರೆ ಗ್ಯಾಸ್ ಏಜೆನ್ಸಿಯನ್ನು ಬದಲಾವಣೆ ಮಾಡಿಕೊಳ್ಳಲಿ ಎಂದು ಉಡಾಫೆಯ ಉತ್ತರ ಕೊಟ್ಟು ಫೋನ್ ಕಟ್ ಮಾಡಿದರು.

ಇದನ್ನು ಓದಿದ್ದೀರಾ? ಗೋಕಾಕ್ | ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ: 14 ಆರೋಪಿಗಳ ಆಸ್ತಿ ಮುಟ್ಟುಗೋಲು; ಎಸ್‌ಪಿ

ಶ್ರೀರಂಗಪಟ್ಟಣ ಆಹಾರ ಶಾಖೆಯ ನಿರೀಕ್ಷಕರಾದ ರಮಾ ಮಾತನಾಡಿ, ತೊಂದರೆ ಆಗಿರುವ ಗ್ರಾಹಕರು ತಮಗೆ ದೂರು ಕೊಟ್ಟಲ್ಲಿ ಏಜೆನ್ಸಿಯವರಿಗೆ ನೋಟಿಸ್ ನೀಡಿ, ವಿಚಾರಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X