- ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ – ಕಾಂಗ್ರೆಸ್ ನಡುವೆ ಹಣಾಹಣಿ
- ತಲಾ ₹60 ಸಾವಿರ ವರೆಗೂ ಬೆಲೆ ಬಾಳುವ ಆರು ಬೆಟ್ಟಿಂಗ್ ಮೇಕೆಗಳು
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಕಣ ರಂಗೇರುತ್ತಿದೆ. ಹಲವು ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ಮಂಡ್ಯ ಜಿಲ್ಲೆಯಲ್ಲಿ ಚುನಾವಣೆ ಬೆಟ್ಟಿಂಗ್ ಭರಾಟೆ ಜೋರಾಗಿ ನಡೆಯುತ್ತಿದೆ.
ಚುನಾವಣೆಗೂ ಮುನ್ನವೇ ತಮ್ಮ ತಮ್ಮ ನಾಯಕರ ಪರವಾಗಿ ಆರು ಮಂದಿ ಯುವಕರು ಬೆಟ್ಟಿಂಗ್ ಕಟ್ಟಿದ್ದಾರೆ. ಇದಕ್ಕಾಗಿ ಎಂಟು ಮೇಕೆಗಳನ್ನು ಬೆಟ್ಟಿಂಗ್ ಕಟ್ಟಿದ್ದಾರೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಬೆಟ್ಟಿಂಗ್ ಶುರುವಾಗಿದ್ದು, ತಾಲೂಕಿನ ಅರಕೆರೆ ಗ್ರಾಮದ ಯುವಕರು ಈಗ ಬೆಟ್ಟಿಂಗ್ ಕಟ್ಟಿದ್ದಾರೆ.
ಶ್ರೀರಂಗಪಟ್ಟಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರವೀಂದ್ರ ಶ್ರೀಕಂಠಯ್ಯ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್ನಿಂದ ರಮೇಶ್ ಬಾಬು ಬಂಡಿಸಿದ್ದೇಗೌಡ ಕಣಕ್ಕಿಳಿದಿದ್ದಾರೆ. ಇಬ್ಬರೂ ಅರಕೆರೆ ಗ್ರಾಮದವರಾಗಿದ್ದು, ಯಾರಿಗೆ ಜಯ ಎಂಬ ಚರ್ಚೆ ಬಹಳವಾಗಿಯೇ ನಡೆದಿದೆ.
ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ
ತಮ್ಮ ನಾಯಕರೇ ಗೆಲ್ಲುತ್ತಾರೆ ಎಂದು ಎರಡು ಗುಂಪಿನಿಂದ ಮೂರು ಮೂರು ಮೇಕೆಗಳನ್ನು ಯುವಕರು ಬೆಟ್ಟಿಂಗ್ ಕಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡ ಪರವಾಗಿ ಗೌಡಗೆರೆ ಬೀದಿಯ ವಿಶ್ವಾಸ್, ಬಾಲು, ಉಮೇಶ್ ಮತ್ತು ಸುನಿಲ್ ಎಂಬುವವರು ಬೆಟ್ಟಿಂಗ್ ಕಟ್ಟಿದರೆ, ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಪರವಾಗಿ ಅಭಿ, ಮಂಜು, ರೀತು ಇತರರು ಸೇರಿ 3 ಮೇಕೆಗಳನ್ನು ಪಣಕ್ಕೆ ಇಟ್ಟಿದ್ದಾರೆ. ಬೆಟ್ಟಿಂಗ್ ಮೇಕೆಗಳು ತಲಾ ₹60 ಸಾವಿರ ವರೆಗೂ ಬೆಲೆ ಬಾಳುತ್ತವೆ ಎಂದು ಹೇಳಲಾಗಿದೆ.