ಶ್ರೀರಂಗಪಟ್ಟಣ | ಸಮಾನತೆಗಾಗಿ ಅಂಬೇಡ್ಕರ್ ದಾರಿಯಲ್ಲಿ ಹೋರಾಟ ನಡೆಸಬೇಕು : ಶಾಸಕ ದರ್ಶನ್ ಪುಟ್ಟಣ್ಣಯ್ಯ

Date:

Advertisements

ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕಿದೆ. ಅವರು ತೋರಿಸಿಕೊಟ್ಟ ಹೋರಾಟದ ದಾರಿಯಲ್ಲಿ ಸಮಾಜತೆಗಾಗಿ ಹೋರಾಟ ನಡೆಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣ್ಯ ತಿಳಿಸಿದರು.

ನ.19ರಂದು ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಗ್ರಾಮದ ಅಂಬೇಡ್ಕರ್ ಭವನದ ವಿಶ್ವಜ್ಞಾನಿ ಜಾನಕೇಂದ್ರಕ್ಕೆ ಭೇಟಿ ನೀಡಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ನಾ ಕಂಡಂತೆ ಇದೆ ಮೊದಲ ಭವನ. ಇಷ್ಟು ಚೆನ್ನಾಗಿ ಇಟ್ಟುಕೊಂಡಿರುವುದು. ಕಟ್ಟಿರುವ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದು. ಅಂದರೆ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುತ್ತಿರುವುದು ಸಾರ್ಥಕವಾಗಿದೆ” ಎಂದರು.

Advertisements
IMG 20241119 WA0031

ವೆಂಕಟೇಗೌಡ ಸೇವಾ ಸಮಿತಿಯ ಡಾ. ಕೆ ವೈ ಶ್ರೀನಿವಾಸ್ ಮಾತನಾಡಿ, ನಾವು ಕೇಳಿದ ತಕ್ಷಣ ಶಾಸಕರು ಅಂಬೇಡ್ಕರ್ ಪುತ್ಥಳಿಗೆ 2೦ ಸಾವಿರ ಧನ ಸಹಾಯ ಮಾಡಿದ್ದಾರೆ. ಅವರಿಗೆ ಪುಸ್ತಕ, ಗ್ರಂಥಾಲಯ ಹಾಗೂ ಶಾಲೆಗಳು ಅಂದರೆ ಬಹಳ ಇಷ್ಟ. ಅದಕ್ಕೆ ಅವರು ಪುಸ್ತಕಗಳನ್ನು ವಿಶ್ವಜ್ಞಾನಿ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಕ್ಯಾತನಹಳ್ಳಿಯಲ್ಲಿ ಬಹಳ ಅದ್ಭುತವಾದ ಶಾಲೆಯನ್ನು ಕಟ್ಟಿಸುತ್ತಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಬೆಂಬಲ ಅವಶ್ಯ : ಸಚಿವ ಚಲುವರಾಯಸ್ವಾಮಿ

ಈ ಸಂದರ್ಭದಲ್ಲಿ ಅವರು ವಿಶ್ವಜ್ಞಾನಿ ಜ್ಞಾನ ಕೇಂದ್ರಕ್ಕೆ ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನ ಕೊಡುಗೆಗಳಾಗಿ ನೀಡಿದರು. ವಿಶ್ವಜ್ಞಾನಿ ಅಂಬೇಡ್ಕರ್ ಸಂಘದಿಂದ ಮೇಲುಕೋಟೆ ಕ್ಷೇತ್ರದ ಜನಪ್ರಿಯ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯರಿಗೆ ವಿಶ್ವಜ್ಞಾನಿ ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಿವಣ್ಣ ಲಾಲಿಪಾಳ್ಯ, ಉಪ ಕಾರ್ಯದರ್ಶಿ ವಸತಿ ನಿಗಮ, ಡಾ. ಕೆ ವೈ ಶ್ರೀನಿವಾಸ್ ವೆಂಕಟೇಗೌಡ ಸೇವಾ ಸಮಿತಿ, ವಿಶ್ವಜ್ಞಾನಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ದರಸಗುಪ್ಪೆ ಗ್ರಾಮ ಪಂಚಾಯಿತಿ ಸದಸ್ಯ ಕೆ ಸುಜಯ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಜಯಶಂಕರ್ ಕೆ ಎಸ್, ಯಜಮಾನರಾದ ಸ್ವಾಮಿ, ಶಿವಣ್ಣ ಕೆ, ಸೂರ್ಯಕುಮಾರ್, ಸಂತೋಷ್ ಕುಮಾರ್, ಜಗದೀಶ್, ವಿಠಲ, ಭಾಗ್ಯಮ್ಮ ಇನ್ನೂ ಮುಂತಾದವರು ಭಾಗಿಯಾಗಿದ್ದರು.

IMG 20241119 WA0034
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X