ಮಂಡ್ಯ| ಶಾಸಕ ಮುನಿರತ್ನ ಅನಾಗರಿಕ ವರ್ತನೆ: ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ

Date:

Advertisements

ಬಿಜೆಪಿ ಶಾಸಕ ಮುನಿರತ್ನರ ಅನಾರಿಕ ವರ್ತನೆಯನ್ನು ನಾಗರಿಕ ಸಮಾಜ ಒಪ್ಪಲು ಸಾಧ್ಯವಿಲ್ಲ. ಇವತ್ತು ರಾಷ್ಟ್ರದಲ್ಲಿ ಯಾವ ರೀತಿಯ ಸಮಾಜವನ್ನು ಕಟ್ಟಿ ಬೆಳೆಸುತ್ತಿದ್ದೇವೆ ಎಂದರೆ ಹೇಸಿಗೆ ಅನಿಸುತ್ತೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕ ಸಿ ಎಸ್ ವೆಂಕಟೇಶ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕರಾದ ಮುನಿರತ್ನ ಒಕ್ಕಲಿಗ ಸಮುದಾಯ ಹಾಗೂ ದಲಿತ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿ ಜಾತಿ ನಿಂದನೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಶ್ರೀರಂಗಪಟ್ಟಣ ತಾಲೂಕು ಕಚೇರಿಯ ಅಂಬೇಡ್ಕರ್ ಪ್ರತಿಮೆಯ ಹತ್ತಿರದಿಂದ ಕುವೆಂಪು ಸರ್ಕಲ್ ತನಕ ಮೆರವಣಿಗೆ ಮಾಡಿದರು. ನಂತರ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದರು. ಶಾಸಕನ ಅನಾಗರಿಕ ವರ್ತನೆಯ ಎದುರು ಸಾಂಕೇತಿಕವಾಗಿ ಎಲ್ಲಾ ಪ್ರಗತಿಪರ ಸಂಘಟನೆಗಳು ಮತ್ತು ರೈತ ಸಂಘ ಒಟ್ಟುಗೂಡಿ ಪ್ರತಿಭಟನೆ ಹಮ್ಮಿಕೊಂಡಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿ ಎಸ್ ವೆಂಕಟೇಶ್ , ಸಂವಿಧಾನ ಜಾರಿಗೆ ಬಂದು 75 ವರ್ಷ ಆಗಿದೆ. ಆರ್ಟಿಕಲ್ 17ರಲ್ಲಿ ಒಂದು ಪದವನ್ನು ಬಳಸಬಾರದು ಅಂತ ಶಾಸನ ಮಾಡಿದೆ. ಪ್ರತಿ ಹಳ್ಳಿ ಹಳ್ಳಿಯಲ್ಲೂ ಯಾವ ಪದ ಬಳಸಬಾರದು ಅಂತ ಜನರಿಗೆ ಗೊತ್ತಿದೆ. ಯಾರೂ ಕೂಡ ಆ ಪದ ಬಳಕೆ ಮಾಡುತ್ತಾ ಇಲ್ಲ. ಅಂಥದರಲ್ಲಿ ಸಂವಿಧಾನದ ಪ್ರಕಾರ ಪ್ರಮಾಣವಚನ ಸ್ವೀಕರಿಸಿದ ಒಬ್ಬ ಜನಪ್ರತಿನಿಧಿ ಶಾಸನ ರೂಪಿಸುವಂತಹ ವ್ಯಕ್ತಿ. ಇವತ್ತು ನಿರ್ಬಂಧಿತ ಪದ ಬಳಕೆ ಮಾಡುತ್ತಾನೆ. ಆತ ಎಂತಹ ಕೀಳು ಅನಾಗರಿಕ ವ್ಯಕ್ತಿ ಆಗಿರಬೇಕು ಎಂದು ಹರಿಹಾಯ್ದರು.

Advertisements

ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ತಾಲೂಕು ರೈತ ಸಂಘದ ನೇತೃತ್ವದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಪಾಂಡು, ಜಯರಾಮೇಗೌಡ, ಚಿಕ್ಕತಮ್ಮೇಗೌಡ, ಡಿಎಸ್ಎಸ್ ಒಕ್ಕೂಟದ ಗಂಜಾಂ ರವಿಚಂದ್ರ, ಹೊನ್ನಪ್ಪ, ಪ್ರಿಯಾ ರಮೇಶ್, ಚಂದ್ರಣ್ಣ, ಕುಬೇರ, ಅಪ್ಪಾಜಿ, ಮಾದೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X