ಎಸ್‍ಎಸ್‍ಎಲ್‍ಸಿ ಪತ್ರಿಕೆ ಮರು ಮೌಲ್ಯಮಾಪನ : ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ

Date:

Advertisements

ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ರ‍್ಯಾಂಕ್ ಗಳಿಸಿದ್ದ ಬೀದರ್‌ ಜಿಲ್ಲೆಯ ಭಾಲ್ಕಿಯ ಸೂರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೇವಿ ಮಲ್ಲಿಕಾರ್ಜುನ ಸೀತಾ, ಪತ್ರಿಕೆಯ ಮರು ಮೌಲ್ಯಮಾಪನದ ಬಳಿಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ.

ದೇವಿ ಮೊದಲು ಶೇ 99.36 ರಷ್ಟು ಅಂಕ ಗಳಿಸಿದ್ದರು. ಅವರಿಗೆ ಹಿಂದಿ ವಿಷಯದಲ್ಲಿ 98 ಅಂಕಗಳು ಬಂದಿದ್ದವು. ಆದರೆ, ಇದರಿಂದ ತೃಪ್ತರಾಗದ ಅವರು ಹಿಂದಿ ವಿಷಯದ ಮರು ಮೌಲ್ಯಮಾಪನಕ್ಕಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗೆ ಅರ್ಜಿ ಸಲ್ಲಿಸಿದ್ದರು.

ಮರು ಮೌಲ್ಯಮಾಪನದ ನಂತರ ಅವರಿಗೆ ಎರಡು ಅಂಕ ಹೆಚ್ಚಾಗಿ ಹಿಂದಿಯಲ್ಲಿ 100ಕ್ಕೆ 100 ಅಂಕ ಬಂದಿವೆ. ಈಗ ವಿದ್ಯಾರ್ಥಿನಿಯ ಒಟ್ಟಾರೆ ಫಲಿತಾಂಶ ಶೇ 99.68ಕ್ಕೆ ಏರಿಕೆಯಾಗಿದ್ದು, ರ‍್ಯಾಂಕ್‌ನಲ್ಲೂ ಎರಡು ಸ್ಥಾನ ಜಿಗಿತ ಕಂಡಿದ್ದಾರೆ.

Advertisements

ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ದೇವಿ 625 ಅಂಕಗಳ ಪೈಕಿ 623 ಅಂಕ ಗಳಿಸಿ ಅಮೋಘ ಸಾಧನೆ ಮಾಡಿದ್ದಾರೆ. ಶಾಲೆ ಫಲಿತಾಂಶದಲ್ಲಿ ಸತತ ಎರಡನೇ ವರ್ಷವೂ ಕಲಬುರಗಿ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಶಾಲೆಯ ಅಧ್ಯಕ್ಷ ಸಂತೋಷ ಖಂಡ್ರೆ ತಿಳಿಸಿದ್ದಾರೆ.

ವಿದ್ಯಾರ್ಥಿ ಸಾಧನೆಗೆ ಶಾಲೆಯ ಕಾರ್ಯದರ್ಶಿ ಉಷಾ ಖಂಡ್ರೆ, ಪ್ರಾಚಾರ್ಯ ಅನಿಲ್ ಪಾಟೀಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X