ಎಸ್ಸೆಸ್ಸೆಲ್ಸಿ ಫಲಿತಾಂಶ | ಶೇ.87.87ರಷ್ಟು ಬಾಲಕಿಯರು ಉತ್ತೀರ್ಣರು

Date:

Advertisements

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಕ್ಕೆ ನಾಲ್ವರು ಪ್ರಥಮ ಸ್ಥಾನಗಳಿಸಿದ್ದಾರೆ. 2021-22ನೇ ಸಾಲಿನಲ್ಲಿ ರಾಜ್ಯದ 145 ವಿದ್ಯಾರ್ಥಿಗಳು ಶೇ.100 ಫಲಿತಾಂಶ ಗಳಿಸಿದ್ದರು. ಈ ಬಾರಿ ನಾಲ್ಕಕ್ಕೆ ಕುಸಿದಿದೆ.

ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳು

  • ಟಾಪರ್‍‌ಗಳಲ್ಲಿ ಒಬ್ಬರಾದ ಯಶಸ್ ಚಿಕ್ಕಬಳ್ಳಾಪುರದವರಾಗಿದ್ದು, ಮಜ್ಜಿಗೆ ಹೊಸಹಳ್ಳಿಯವರು. ತಂದೆ ಕೃಷಿಕ ಮತ್ತು ಜೀವ ವಿಮಾ ನಿಗಮದಲ್ಲಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 
  • ರಾಜ್ಯಕ್ಕೆ ಪ್ರಥಮ ಸ್ಥಾನ ಬಂದ ಮತ್ತೊಬ್ಬ ವಿದ್ಯಾರ್ಥಿ ಅನುಪಮಾ ಶ್ರೀಶೈಲ ಹಿರೇಹೊಳಿ, ಬೆಳಗಾವಿ ಜಿಲ್ಲೆಯ ಸವದತ್ತಿಯವರು. ಅನುಪಮಾ ಅವರು ಪ್ರತಿನಿತ್ಯ ರಾತ್ರಿ ಹನ್ನೆರಡರ ತನಕ ಅಭ್ಯಾಸ ಮಾಡುತ್ತಿದ್ದರು. ಸವದತ್ತಿ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ತಂದೆ ಕಳೆದ ವರ್ಷ ಮೃತಪಟ್ಟಿದ್ದಾರೆ. ಒಬ್ಬಂಟಿಯಾಗಿದ್ದ ತಾಯಿ ಕಣ್ಣಿನ ಆಸ್ಪತ್ರೆಯಲ್ಲಿ ಕೆಲಸ ಮಾಡಿ ತಮ್ಮ ಮಗಳು ಉತ್ತುಂಗ ಸ್ಥಾನಕ್ಕೆ ಬರಲು ಕಾರಣರಾಗಿದ್ದಾರೆ.
  • ಬೆಂಗಳೂರಿನವರಾದ  ಭೂಮಿಕಾ ಫೈ ಸಹ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ. ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿದ್ದಾರೆ. ಯಾವುದೇ ಟ್ಯೂಶನ್ ಪಡೆಯುತ್ತಿರಲಿಲ್ಲ. ಮನೆಯಲ್ಲಿಯೇ ಏಳೆಂಟು ಗಂಟೆಗಳ‌ ಕಾಲ ಅಭ್ಯಾಸ ಮಾಡುತ್ತಿದ್ದೆ ಎಂದು ಪ್ರಥಮ ಸ್ಥಾನ ಪಡೆದ ಗುಟ್ಟು ಬಿಚ್ಚಿದ್ದಾರೆ.  
  • ವಿಜಯಪುರದವರಾದ ಭೀಮನ ಗೌಡ ಅನುಮಂತ ಗೌಡ ಬಿರಾಧರ್ ಪಾಟೀಲ್ ರಾಜ್ಯಕ್ಕೆ  ಪ್ರಥಮ ಸ್ಥಾನ ಬಂದ ನಾಲ್ವರಲ್ಲಿ ಒಬ್ಬರಾಗಿದ್ದಾರೆ. ರೈತ ಕುಟುಂಬದವರು.

ಹೆಣ್ಮಕ್ಕಳೇ ಮೇಲು ಗೈ

Advertisements

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೀವನದ ಮೊದಲ ಘಟ್ಟವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟಾರೆಯಾಗಿ ಬಾಲಕಿಯರು 4,09,134 ಹಾಜರಾಗಿದ್ದರು, ಅವರಲ್ಲಿ  3,59,511 ಉತ್ತೀರ್ಣರಾಗಿದ್ದಾರೆ. ಎಂದಿನಂತೆ ಬಾಲಕಿಯರೇ ಶೇ.87.87ರಷ್ಟು ಫಲಿತಾಂಶ ಗಳಿಸಿ, ‘ಹೆಣ್ಮಕ್ಳೇ ಸ್ಟ್ರಾಂಗು’ ಎನಿಸಿಕೊಂಡಿದ್ದಾರೆ. ಆದರೂ, 2021-22 ನೇ ಸಾಲಿನ ಫಲಿತಾಂಶಕ್ಕೆ ಹೋಲಿಸಿಕೊಂಡರೆ ಈ ಬಾರಿ ಕೊಂಚ ಇಳಿಕೆ ಕಂಡಿದೆ. ಕಳೆದ ವರ್ಷ ಶೇ. 89.98 ಬಾಲಕಿಯರು ಉತ್ತೀರ್ಣರಾಗಿದ್ದರು.

ಈ ಸುದ್ದಿ ಓದಿದ್ದೀರಾ?: ಎಸ್ಸೆಸ್ಸೆಲ್ಸಿ ಪರೀಕ್ಷೆ| ಶೇ.100 ಫಲಿತಾಂಶ ಪಡೆದ ನಾಲ್ಕು ವಿದ್ಯಾರ್ಥಿಗಳು

ಬಾಲಕರ ಫಲಿತಾಂಶ

2022-23ನೆ ಸಾಲಿನಲ್ಲಿ 4,45,828 ಬಾಲಕರು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 3,59,438 ಉತ್ತೀರ್ಣರಾಗಿದ್ದರು. ಒಟ್ಟು ಶೇ.80.62ರಷ್ಟು ಫಲಿತಾಂಶವನ್ನು ಬಾಲಕರು ಗಳಿಸಿದ್ದಾರೆ. 2021-22ನೇ ಸಾಲಿನಲ್ಲಿ ಶೇ.80ರಷ್ಟು ಮಂದಿ ಉತ್ತೀರ್ಣರಾಗಿದ್ದರು.

ರಾಜಕೀಯ ನಾಯಕರಿಂದ ವಿದ್ಯಾರ್ಥಿಗಳಿಗೆ ಹಾರೈಕೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರು ಹಾರೈಸಿದ್ದು, ಅನುತ್ತೀರ್ಣರಾದವರಿಗೆ ಆತ್ಮಸ್ಥೈರ್ಯ ತುಂಬಿ ಟ್ವೀಟ್ ಮಾಡಿದ್ದಾರೆ.

“ಎಸ್ಸೆಸ್ಸೆಲ್ಸಿ ಪರೀಕ್ಷಾ  ಫಲಿತಾಂಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಉತ್ತಮ ಸಾಧನೆ ಮಾಡಿದ್ದು, ಶೇ.96.15 ಫಲಿತಾಂಶದೊಂದಿಗೆ ರಾಜ್ಯದಲ್ಲೇ 5ನೇ ಸ್ಥಾನ ಗಳಿಸಿದೆ ಹಾಗೂ ಚಿಕ್ಕಬಳ್ಳಾಪುರದ ಮಜ್ಜಿಗೆ ಹೊಸಹಳ್ಳಿಯ ಎನ್.ಯಶಸ್ ಗೌಡ 625ಕ್ಕೆ 625 ಅಂಕಗಳೊಂದಿಗೆ ರಾಜ್ಯಕ್ಕೇ ಮೊದಲ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರಿಗೆ ಹೃದಯಪೂರ್ವಕ ಅಭಿನಂದನೆಗಳು” ಎಂದು ಆರೋಗ್ಯ ಸಚಿವ ಸುಧಾಕರ್‍ ಟ್ವೀಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X