ಬಸ್‌ಗಳ ಮೇಲೆ ತಂಬಾಕು ಜಾಹೀರಾತು ನಿಷೇಧ: ಆರೋಗ್ಯ ಇಲಾಖೆ

Date:

Advertisements
  • ತಂಬಾಕು ಜಾಹೀರಾತು ಕಾನೂನು ಉಲ್ಲಂಘನೆ
  • ಆಲ್ಕೋಹಾಲ್, ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ

ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಜಾಹೀರಾತು ಇದ್ದರೆ ತೆರವುಗೊಳಿಸಬೇಕು. ನಿಮ್ಮ ಬಸ್‌ಗಳು ತಂಬಾಕು ಜಾಹೀರಾತು ರಹಿತವಾಗಿರಬೇಕೆಂದು ಬಸ್ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದೆ, ತಂಬಾಕು ಮುಕ್ತ ಕರ್ನಾಟಕ (ಸಿಎಫ್‌ಟಿಎಫ್‌ಕೆ) ಒಕ್ಕೂಟ, “ಅನಧಿಕೃತವಾಗಿ ಬಸ್‌ಗಳ ಮೇಲೆ ಅಳವಡಿಸುವ ತಂಬಾಕು ಜಾಹೀರಾತುಗಳನ್ನು ತೆರವುಗೊಳಿಸಬೇಕು. ಈ ರೀತಿಯ ಜಾಹೀರಾತುಗಳಿಂದ ಜನರು ಪ್ರಚೋದನೆಗೆ ಒಳಗಾಗಿ, ಅದರ ಬಳಕೆ ಹೆಚ್ಚು ಮಾಡುತ್ತಾರೆ. ಇದರಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ. ಈ ರೀತಿ ಪ್ರಚಾರ ಮಾಡುವುದನ್ನು ತಡೆಯಲು ಸೂಚನೆ ನೀಡಬೇಕು” ಎಂದು ಆರೋಗ್ಯ ಇಲಾಖೆಗೆ ಮನವಿ ಮಾಡಿತ್ತು.

ಭಾರತದಲ್ಲಿ ತಂಬಾಕು ಮತ್ತು ಆಲ್ಕೋಹಾಲ್ ಉತ್ಪನ್ನಗಳ ಜಾಹೀರಾತು ನಿಷೇಧಿಸಲಾಗಿದೆ. ವಿಮಲ್ ಪಾನ್ ಮಸಾಲಾ, ರಜನಿಗಂಧ ಸೇರಿದಂತೆ ಮತ್ತಿತ್ತರ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಿಗೆ, ಜಾಹೀರಾತು ಅಳವಡಿಸದಿರಲು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರವು ಈಗಾಗಲೇ ನೋಟಿಸ್ ನೀಡಿದೆ.

Advertisements

ಈ ಸುದ್ದಿ ಓದಿದ್ದೀರಾ?: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹೆಚ್ಚಳ; ರಾಜ್ಯದಲ್ಲಿ ವರ್ಷಕ್ಕೆ 1.4 ಲಕ್ಷ ಪ್ರಕರಣ ದಾಖಲು

ಆದರೂ, ಸೂಚನೆ ಪಾಲಿಸದೆ ತಂಬಾಕು ಮಾರಾಟ ಕಂಪನಿಗಳು ಬಸ್‌ಗಳ ಮೇಲೆ ಜಾಹೀರಾತು ಅಳವಡಿಸಲು ಒಪ್ಪಂದ ಮಾಡಿಕೊಂಡಿವೆ ಎಂದು ಸಿಎಫ್‌ಟಿಎಫ್‌ಕೆ ಆರೋಗ್ಯ ಇಲಾಖೆಗೆ ಹೇಳಿತ್ತು. ಮನವಿಯ ಬೆನ್ನಲೇ ಆರೋಗ್ಯ ಇಲಾಖೆ ಜಾಹೀರಾತು ಅಳವಡಿಕೆಗೆ ಆರೋಗ್ಯ ಇಲಾಖೆ ಕಡಿವಾಣ ಹಾಕಿದೆ.

“ಇತ್ತೀಚೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಿಮಲ್, ಕೂಲ್ ಲಿಪ್ ಮತ್ತು ಆರ್‌ಎಮ್‌ಡಿಯಂತಹ ಬ್ರ್ಯಾಂಡ್‌ಗಳ ತಂಬಾಕು ಮತ್ತು ಪಾನ್ ಮಸಾಲಾ ಉತ್ಪನ್ನಗಳ ಜಾಹೀರಾತು ಇರುವುದು ಕಂಡುಬಂದಿದೆ. ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ (ಕೋಟ್ಪಾ) ಸೆಕ್ಷನ್ 5 ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ಎಫ್‌ಸಿಟಿಸಿ ಆರ್‍‌ಟಿಕಲ್ 5.3ರ ಉಲ್ಲಂಘನೆಯಾಗಿದೆ. ಇನ್ನೂ ಬಸ್‌ಗಳ ಮೇಲೆ ಜನತೆಯ ಆರೋಗ್ಯಕ್ಕೆ ಹಾನಿಕಾರಕವಾದ ತಂಬಾಕುವಿನ ಜಾಹೀರಾತು ಇರದಂತೆ ನೋಡಿಕೊಳ್ಳಿ” ಎಂದು ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಮೇ .4ರಂದು ಹೊರಡಿಸಿರುವ ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X