ಮದ್ದೂರು | ಬಣಗಳನ್ನು ಒಗ್ಗೂಡಿಸಿ ರೈತ ಸಂಘ ಬಲವರ್ಧನೆಗೊಳಿಸಿ: ಪಚ್ಚೆ ನಂಜುಂಡಸ್ವಾಮಿ

Date:

Advertisements

ಬಣಗಳನ್ನು ಒಗ್ಗೂಡಿಸಿ ರೈತ ಸಂಘವನ್ನು ಬಲವರ್ಧನೆಗೊಳಿಸಿ. ತಾತ್ವಿಕ ಭಿನ್ನಾಭಿಪ್ರಾಯದ ಕಾರಣದಿಂದ ಹಲವು ಬಣಗಳಾಗಿ ಹಂಚಿ ಹೋಗಿರುವ ರೈತ ಸಂಘಟನೆಯನ್ನು ಏಕೀಕರಣಗೊಳಿಸಿ, ಒಗ್ಗೂಡಿಸಿ ಒಂದೇ ಬ್ಯಾನರ್‌ನಡಿ ರೈತಪರ ಹೋರಾಟಗಳನ್ನು ಮಾಡಿ ರೈತರ ಹಿತ ಕಾಯೋಣ‌ ಎಂದು ಪಚ್ಚೆ ನಂಜುಂಡಸ್ವಾಮಿ ಹೇಳಿದರು.

ಮಂಡ್ಯ ಜಿಲ್ಲೆಯ ಮದ್ದೂರಿನ ಭಾರತಿನಗರದಲ್ಲಿ ನಡೆದ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯ ಮಟ್ಟದ ಏಕೀಕೃತ ಕರ್ನಾಟಕ ರಾಜ್ಯ ರೈತ ಸಂಘದ ಸಭೆಗೆ ಆಗಮಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದು, ಡಿಸೆಂಬರ್ 23ರ ರೈತ ದಿನಾಚರಣೆ ಹಾಗೂ ಪುಟ್ಟಣ್ಣಯ್ಯ ಹುಟ್ಟು ಹಬ್ಬದ ದಿನ ರಾಜ್ಯದ ಎಲ್ಲ ರೈತ ಸಂಘಟನೆಗಳ ಗುಂಪುಗಳನ್ನು ಒಗ್ಗೂಡಿಸಿ ಸಭೆ ನಡೆಸುವುದಾಗಿ ಹೇಳಿದ್ದಾರೆ” ಎಂದರು.

Advertisements

ಇದಕ್ಕೆ ಭಾರತಿನಗರ ವೃತ್ತ ರೈತಸಂಘ ಕೂಡ ಏಕೀಕೃತ ರೈತ ಸಂಘದ ಭಾಗವಾಗುವ ಕುರಿತು ಸಭೆ ನಿರ್ಣಯ ಕೈಗೊಂಡಿತು.

ಇದನ್ನು ಓದಿದ್ದೀರಾ? ಮಂಡ್ಯ | ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು: ಅಭಿಗೌಡ

ಸಭೆಯಲ್ಲಿ ಹಿರಿಯ ರೈತ ಮುಖಂಡರಾದ ಯರಗನಹಳ್ಳಿ ರಾಮಕೃಷ್ಣ, ರಾಂಪುರ ಸೀತಾರಾಮು, ಮಂಡ್ಯದ ಮರಿಚನ್ನೇಗೌಡ, ಮೈಸೂರು ಜಿಲ್ಲಾ ರೈತ ಸಂಘದ ವಿದ್ಯಾ ಸಾಗರ್, ಕುರಿಕೆಂಪನದೊಡ್ಡಿ ರಾಮಲಿಂಗು, ಕ್ಯಾತಘಟ್ಟ ಬಿಳಿಗೌಡ, ಪಣ್ಣೆದೊಡ್ಡಿ ವೆಂಕಟೇಶ್, ಸೊಳ್ಳೆಪುರ ಸೊ ಶಿ ಪ್ರಕಾಶ್, ಪ್ರಭುಲಿಂಗು, ನ ಲಿ ಕೃಷ್ಣ ಸೇರಿ ಒಮ್ಮತದಿಂದ ಬೆಂಬಲ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X