ಬೀದರ್‌ | ದಲಿತ ರೈತರ ಜಮೀನು ತೆರವು ಖಂಡಿಸಿ ಅರಣ್ಯ ಇಲಾಖೆ ಕಚೇರಿ ಎದುರು ಮುಷ್ಕರ

Date:

Advertisements

ಬಡ ದಲಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಕ್ರಮವನ್ನು ವಿರೋಧಿಸಿ ಜನವರಿ 3 ರಿಂದ ನಗರದ ಜಿಲ್ಲಾ ಅರಣ್ಯ ಇಲಾಖೆ ಕಚೇರಿ ಎದುರು ಮುಷ್ಕರ ನಡೆಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಜೈಭೀಮ ದಳದ ಅಧ್ಯಕ್ಷ ಮಾರುತಿ ಕಂಟಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ʼನಗರದ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮ ಖಂಡಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆʼ ಎಂದರು.

1978-79ರಿಂದ ದಲಿತ ಸಮುದಾಯದ ರೈತರು ಜಮೀನು ಉಳುಮೆ ಮಾಡುತ್ತಿದ್ದಾರೆ. ಸ್ವತಃ ಸರ್ಕಾರವೇ ಅವರಿಗೆ ಭೂಮಿ ಹಂಚಿಕೆ ಮಾಡಿದೆ. ಹೀಗಿರುವಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಏಕಾಏಕಿ ಒಕ್ಕಲೆಬ್ಬಿಸುತ್ತಿರುವುದು ಎಷ್ಟು ಸರಿ. ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಸಿ ಹೋಟೆಲ್‌, ರೇಸ್ಟೊರೆಂಟ್‌, ಶಾಲಾ-ಕಾಲೇಜು, ಶಾಪಿಂಗ್‌ ಮಾಲ್‌ ನಡೆಸುವ ಬಲಾಢ್ಯರ ವಿರುದ್ಧ ಯಾವುದೇ ಕ್ರಮ ಜರುಗಿಸಲು ಮುಂದಾಗುತ್ತಿಲ್ಲʼ ಎಂದು ದೂರಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಚಲಿಸುತ್ತಿದ್ದ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

ಪತ್ರಿಕಾಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ಮುಖಂಡರಾದ ತುಕಾರಾಮ ಗೌರೆ, ಹಣಮಂತ ಮಟ್ಟೆ ಹಾಗೂ ಭೀಮ ಟೈಗರ್‌ ಸೇನೆಯ ಜಿಲ್ಲಾಧ್ಯಕ್ಷ ನರಸಿಂಗ್‌ ಸಾಮ್ರಾಟ್‌ ಹಾಗೂ ರತಿನ್‌ ಕಮಲ್, ಅಂಬೇಡ್ಕರ್‌ ಸಾಗರ್‌, ರಮೇಶ ಗೌಡ ಸಾಗರ್‌ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X