ದಾವಣಗೆರೆ | ಕಾರ್ಮಿಕರ ಮಕ್ಕಳಿಗೆ ಶೀಘ್ರದಲ್ಲಿ ವಿದ್ಯಾರ್ಥಿ ವೇತನ; ಸಚಿವ ಸಂತೋಷ್ ಲಾಡ್

Date:

Advertisements

ನವೆಂಬರ್ 9ರಂದು ವಿಧಾನಸೌಧದಲ್ಲಿ ಏರ್ಪಡಿಸುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ನೀಡಲು ಚಾಲನೆ ನೀಡಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಮಾಹಿತಿ ನೀಡಿದ್ದಾರೆ.

ದಾವಣಗೆರೆ ಪಾಲಿಕೆಯ ಸಭಾಂಗಣದಲ್ಲಿ ಸಂಘಟಿತ, ಅಸಂಘಟಿತ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಂದ ಅಹವಾಲು ಆಲಿಸಿ ಸರ್ಕಾರದಿಂದ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಅವರು ಮಾತನಾಡಿದರು.

ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. ಈ ಪ್ರಕ್ರಿಯೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು.

Advertisements

ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಉಳಿಸಿ ಬೆಳೆಸುವ ಮೂಲಕ ಇದರ ಸಾಮರ್ಥ್ಯವನ್ನು ಇನ್ನೂ ಹೆಚ್ಚಿಸಲು ಹೊಸ ಕಾನೂನು ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೊಸ ಟೆಕ್ನಾಲಜಿ ಆಪ್ ಬಿಡುಗಡೆ ಮಾಡಲಾಗುತ್ತದೆ. ಹೊಸ ಟೆಕ್ನಾಲಜಿಯಿಂದ ಎಲ್ಲ ಮಾಹಿತಿಯು ಸಂಗ್ರಹವಾಗಲಿರುವುದರಿಂದ ಸೆಸ್ ಸಂಗ್ರಹ ಮತ್ತು ನಿರ್ವಹಣೆ ಸುಲಭವಾಗಲಿದೆ.

ಮನೆ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು ಮತ್ತು ವಿವಿಧ ಇ-ಕಾಮರ್ಸ್‍ನಲ್ಲಿ ಕೆಲಸ ಮಾಡುವವರಿಗೆ ʼಗಿಗ್ʼ ಕಾರ್ಮಿಕರೆಂದು ಕರೆಯಲಾಗುತ್ತದೆ. ಇವರಿಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಉದ್ದೇಶಿಸಲಾಗಿದ್ದು, ಮನೆ ಕೆಲಸದ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಲು ಆಸ್ತಿ ತೆರಿಗೆಯಲ್ಲಿ ಸೆಸ್ ಸಂಗ್ರಹಿಸುವ ಮೂಲಕ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶವಿದ್ದು, ಈ ವರ್ಷದಲ್ಲಿ ಅನುಷ್ಟಾನಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಮಿಕರ ಸಹಾಯಕ್ಕಾಗಿ ಟೋಲ್ ಫ್ರೀ ಸಂಖ್ಯೆಯನ್ನು ಸ್ಥಾಪಿಸಲಾಗುತ್ತಿದ್ದು ಕನಿಷ್ಠ ವೇತನವನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರಿಗೆ ಟೋಲ್ ಫ್ರೀ ಸಂಖ್ಯೆಯಿಂದ ಪರಿಹಾರ, ತಾತ್ಕಾಲಿಕ ಸಹಾಯ ಮತ್ತು ಕುಂದುಕೊರತೆಗಳ ನಿವಾರಣೆಗೆ ಸಹಕಾರಿಯಾಗಲಿದೆ.

ಹೊರಗುತ್ತಿಗೆ ಕಾರ್ಮಿಕರ ಹಿತ ಕಾಪಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾವಾರು ಹೊರಗುತ್ತಿಗೆ ಸೊಸೈಟಿ ಮಾಡುವ ಮೂಲಕ ಈಗಿರುವ ಹೊರಗುತ್ತಿಗೆ ಕಾರ್ಮಿಕರಿಗೆ ಸೊಸೈಟಿ ಮೂಲಕ ಇಪಿಎಫ್, ಇಎಸ್‍ಐ ಸೌಲಭ್ಯಗಳು ತ್ವರಿತಗತಿಯಲ್ಲಿ ಸಿಗುವಂತೆ ಮಾಡಲು ಉದ್ದೇಶಿಸಲಾಗಿದೆ. ಸರ್ಕಾರಿ ವಲಯದಲ್ಲಿ ವಿವಿಧ ಜಿಲ್ಲೆಗಳಲ್ಲಿ 4 ಲಕ್ಷಕ್ಕಿಂತ ಅಧಿಕ ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದು ಇವರೆಲ್ಲರಿಗೂ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಟ್ರೇಡ್ ಯೂನಿಯನ್ ಪದಾಧಿಕಾರಿಗಳು, ಎಐಟಿಸಿ ಪದಾಧಿಕಾರಿಗಳು, ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಟೈಲರ್ ಸಂಘದ ಪದಾಧಿಕಾರಿಗಳು, ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು, ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ, ಕಾರ್ಮಿಕ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಯಿಸಿನ್, ಆಯುಕ್ತ ಡಾ. ಎಚ್.ಎನ್. ಗೊಪಾಲಕೃಷ್ಣ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಡಿ. ಭಾರತಿ, ಪ್ಯಾಕ್ಟರೀಸ್ ಮತ್ತು ಬಾಯ್ಲರ್ಸ್ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X