ಮೈಸೂರು | ಶಾರದ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪುಂಡಾಟಿಕೆ; ಶಿಸ್ತು ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ

Date:

Advertisements

ಮೈಸೂರಿನ ಶಾರದ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಅಭಿಷೇಕ್, ಸುಮಂತ್, ಪ್ರದೀಪ್, ರಾಮಕೃಷ್ಣ ಪುಂಡಾಟಿಕೆ ನಡೆಸಿ, ಗೋಡೆಗಳಲ್ಲಿ ಆಕ್ಷೇಪಾರ್ಹ ಬರಹಗಳನ್ನು ರಾಜಾರೋಷವಾಗಿ ಅಂಟಿಸಿದ್ದಾರೆ. ಕಾಲೇಜಿನ ವ್ಯವಸ್ಥಾಪಕ ಸಮಿತಿ ವಿರುದ್ಧವು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದುವರೆಗೆ ಯಾವುದೇ ಶಿಸ್ತು ಕ್ರಮ ಕೈಗೊಳ್ಳದ ಆಡಳಿತ ಮಂಡಳಿಯ ವಿರುದ್ಧ ಇನ್ನಿತರೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ನ್ಯಾಯ ಕೊಡಿಸುವಂತೆ ಮನವಿ ಸಲ್ಲಿಸಿದ್ದಾರೆ.

ಕಾನೂನು ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಅಣುಕು ನ್ಯಾಯಾಲಯ ಸ್ಪರ್ಧೆಯನ್ನ ಕಾಲೇಜಿನ ಮೂರನೆ ವರ್ಷದ ನಾಲ್ಕನೇ ಸೆಮಿಸ್ಟರ್ ನ ಕೆಲ ವಿದ್ಯಾರ್ಥಿಗಳು ಪುಂಡಾಟಿಕೆ ಮೆರೆದು ಅಣಕು ನ್ಯಾಯಾಲಯ ನಿಲ್ಲುವಂತೆ ಮಾಡಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ವಿದ್ಯಾರ್ಥಿ ಕಾಳಿಂಗರಾಜ ಆರೋಪ ಮಾಡಿದ್ದಾರೆ.

ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೇ ಕಾಲೇಜಿನ ಕಾರಿಡಾರ್ ಗೋಡೆಗಳ ಮೇಲೆ ಅಸಭ್ಯವಾಗಿ ಬರೆದು ಎಲ್ಲರಿಗೂ ಕಾಣುವ ಜಾಗದಲ್ಲಿ ಅಂಟಿಸಿ ಕಾಲೇಜಿನ ಶಾಂತಿಯನ್ನ ಹಾಳು ಮಾಡುತಿದ್ದು ವಿದ್ಯಾರ್ಥಿಗಳಿಗೆ ತೊಂದರೆ ಆಗುವಂತೆ ನಡೆದುಕೊಳ್ಳುತ್ತಿದ್ದಾರೆ.

Advertisements

ಇದೆಲ್ಲವೂ ಸರಿ ಸುಮಾರು 13 ದಿನಗಳ ಹಿಂದೆ ನಡೆದಿದ್ದು, ಕ್ರಮ ಕೈಗೊಳ್ಳುವಂತೆ ಪದೇ ಪದೆ ಮನವಿ ಸಲ್ಲಿಸಿದ್ದರು, ತಪ್ಪಿತಸ್ಥರ ಮೇಲೆ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಇಂದು ಎಲ್ಲಾ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿ ಡೀನ್ ಎ. ಎನ್. ಬೊಳ್ಳಮ್ಮ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ.

ಡೀನ್ ಅವರು ಒಂದೆರೆಡು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡಿದ್ದಾರೆ. ಒಂದು ವೇಳೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಸ್ಲೀಮ್ ನಿಯೋಗದಿಂದ ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಕೆ

ಪ್ರತಿಭಟನೆಯಲ್ಲಿ ಅನ್ನಪೂರ್ಣ, ಪ್ರಸನ್ನ, ಸ್ನೇಹ, ರಾಮಕೃಷ್ಣ, ಕೃಷ್ಣವೇಣಿ, ಜೀವನ್ ಸೇರಿದಂತೆ ಇನ್ನಿತರ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X