ಬೀದರ್‌ | ವಿದ್ಯಾರ್ಥಿಗಳು ಮೌಢ್ಯ ತೊರೆದು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು: ಗುಂಡಪ್ಪ ಹುಡಗೆ

Date:

Advertisements

ಮೌಢ್ಯ ತೊರೆದು ವಿಜ್ಞಾನದ ತಳಹದಿಯ ಮೇಲೆ ಮಕ್ಕಳು ಜೀವನ ರೂಪಿಸಿಕೊಳ್ಳಬೇಕು ಎಂದು ಸಮಗ್ರ ಶಿಕ್ಷಣ ಯೋಜನಾ ಸಮನ್ವಯಾಧಿಕಾರಿ ಗುಂಡಪ್ಪ ಹುಡಗೆ ಸಲಹೆ ನೀಡಿದರು.

ಔರಾದ ತಾಲೂಕಿನ ಎಕಲಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಸರಾ ರಜೆ ಸದ್ಬಳಕೆ ಹಿನ್ನೆಲೆ ಬುಧುವಾರ ಆಯೋಜಿಸಿರುವ ʼವೈಜ್ಞಾನಿಕ ಚಿಂತನೆ ಹಾಗೂ ಅಧ್ಯಯನʼ ಶಿಬಿರದಲ್ಲಿ ಅವರು ಮಾತನಾಡಿದರು.

“ಪ್ರತಿಯೊಂದು ವೈಜ್ಞಾನಿಕ ದೃಷ್ಟಿಕೋನದಿಂದ ಕಲಿಯಬೇಕು. ಸ್ವಾಮಿ ವಿವೇಕಾನಂದ, ಡಾ. ಬಿ.ಆರ್ ಅಂಬೇಡ್ಕರ್, ಮಹಾತ್ಮ ಬುದ್ದ, ಬಸವ, ಗಾಂಧೀಜಿ, ಸಿ.ವಿ ರಾಮನ್, ಅಬ್ದುಲ್ ಕಲಾಂ ಸೇರಿದಂತೆ ಇನ್ನಿತರ ಸಾಧಕರ ವೈಜ್ಞಾನಿಕ ಹಾಗೂ ವೈಚಾರಿಕ ವಿಚಾಧಾರೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು” ಹೇಳಿದರು.

Advertisements

ಪ್ರೌಢಶಾಲಾ ಶಿಕ್ಷಕ ಸಂಘದ ನಿರ್ದೇಶಕ ಶಾಮಸುಂದರ್ ಖಾನೂಪೂರೆ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಮನುಷ್ಯತ್ವದ ಕೊರತೆ ಎದ್ದು ಕಾಣುತ್ತಿದೆ. ಮಾಢ್ಯದಿಂದ ಮುಗ್ಧ ಜನರು ಯಾವೆಲ್ಲ ರೀತಿ ವಂಚನೆಗೆ ಒಳಗಾಗುತ್ತಾರೆ ಎಂಬುದನ್ನು ಹಲವಾರು ನಿದರ್ಶನಗಳ ಮೂಲಕ ಮಕ್ಕಳಿಗೆ ತಿಳಿಸಿದರು.

ಶಿಬಿರದ ಸಂಯೋಜಕ ಶಿಕ್ಷಕ ಬಾಲಾಜಿ ಅಮರವಾಡಿ ಮಾತನಾಡಿ, “ಮಕ್ಕಳು ಚಿಕ್ಕಂದಿನಿಂದಲೇ ವೈಜ್ಞಾನಿಕವಾಗಿ ಯೋಚಿಸಲು ಶಕ್ತರಾಗಬೇಕು ಮತ್ತು ದಸರಾ ರಜೆಯ ಸದುಪಯೋಗವಾಗಲಿ ಎಂಬ ಉದ್ದೇಶದಿಂದ ಈ ಶಿಬಿರ ಏರ್ಪಡಿಸಲಾಗಿದ್ದು, ಅಕ್ಟೋಬರ್ 18 ರವರೆಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರಾಫ್ಟ್, ಯೋಗ ಮತ್ತು ಧ್ಯಾನ ಸೇರಿದಂತೆ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಪೂರಕವಾದ ವಿಷಯಗಳ ಕುರಿತು ಮಾರ್ಗದರ್ಶನ ನೀಡಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಚೆಂಡು ಹೂ ಕೃಷಿ : ಉತ್ತಮ ಆದಾಯದ ನಿರೀಕ್ಷೆಯಲ್ಲಿ ಯುವ ರೈತ

ಕಾರ್ಯಕ್ರಮದಲ್ಲಿ ಕೊಳ್ಳೂರ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ ಪಾಂಡ್ರೆ, ಮಾಜಿ ಸೈನಿಕ ನಾಗುರಾಂ, ಸಿಆರ್‌ಪಿ ಮಹಾದೇವ ಘೂಳೆ, ಅನೀಲಕುಮಾರ ಮಾಟೆ, ಎಸ್‌ಡಿಎಂಸಿ ಸದಸ್ಯ ಶಿವಾನಂದ ಬಿರಾದಾರ್, ಮುಖ್ಯ ಶಿಕ್ಷಕ ಪ್ರಭು ಬಾಳೂರೆ ಹಾಗೂ ಶಿಕ್ಷಕರಾದ ಅಂಕುಶ ಪಾಟೀಲ್, ಸಿದ್ದೇಶ್ವರಿ, ರೂಪಾ, ಕಿರಣ ಹಿಪ್ಪಳಗಾವೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X