ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸಾವು; ನ್ಯಾಯಾಂಗ ತನಿಖೆಗೆ ಎಸ್‌ಯುಸಿಐ ಒತ್ತಾಯ

Date:

Advertisements

ಬಳ್ಳಾರಿ ಮತ್ತು ಬೆಳಗಾವಿಯ ಸರ್ಕಾರಿ ಆಸ್ಪತ್ರೆಳಲ್ಲಿ ಸೇರಿದಂತೆ ಈವರೆಗೆ ರಾಜ್ಯಾದ್ಯಂತ ಬಾಣಂತಿಯರ ಸಾವು ಸಂಭವಿಸಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಒತ್ತಾಯಿಸಿದ್ದಾರೆ.

ವಿಜಯಪುರ ನಗರದಲ್ಲಿ ಪತ್ರಿಕೆ ಪ್ರಕಟಣೆ ನೀಡಿದ ಅವರು, “ಆಸ್ಪತ್ರೆಗಳಲ್ಲಿ ಸಂಭವಿಸಿದ ಬಾಣಂತಿಯರ ದುರಂತಮಯ ಸಾವುಗಳು ರಾಜ್ಯದಲ್ಲಿ ಆಳುವ ಮತ್ತು ವಿರೋಧ ಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿರುವುದು ಅತ್ಯಂತ ವಿಪರ್ಯಾಸದ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

“ಹಿಂದಿನ ಬಿಜೆಪಿ ಆಳ್ವಿಕೆಯ ಸಂದರ್ಭದಲ್ಲೂ ಸೇರಿದಂತೆ ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ 3000ಕ್ಕೂ ಹೆಚ್ಚು ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಮುಖ್ಯಮಂತ್ರಿಗಳೇ ಸದನದಲ್ಲಿ ಉಲ್ಲೇಖಿಸಿದ್ದಾರೆ. ಬಿಜೆಪಿಯ ಆಳ್ವಿಕೆಯಲ್ಲೂ ಬಾಣಂತಿಯರು ಆಸ್ಪತ್ರೆಗಳಲ್ಲಿ ಜೀವ ಬಿಟ್ಟಿದ್ದಾರೆ ಎಂಬುದು ಕಾಂಗ್ರೆಸ್ ಸರ್ಕಾರವನ್ನು ಯಾವ ರೀತಿಯಿಂದಲೂ ಸಮರ್ಥಿಸಿದಂತೆ ಆಗುವುದಿಲ್ಲ. ಬದಲಿಗೆ ಎರಡೂ ಪಕ್ಷಗಳಿಗೆ ಜನರ ಜೀವದ ಕುರಿತು ಇರುವ ನಿಷ್ಕಾಳಜಿಯನ್ನು ಎತ್ತಿ ತೋರಿಸುತ್ತದೆ” ಎಂದರು.

Advertisements

“ಬಳ್ಳಾರಿಯಲ್ಲಿ ಸಂಭವಿಸಿದ ಸಾವುಗಳಿಗೆ ಕಳಪೆ ಗುಣಮಟ್ಟದ ಔಷಧಿ ಕಾರಣವೆಂದು ಹೇಳಲಾಗುತ್ತಿದೆ. ಹೌದಾದರೆ ಇಂತಹ ಔಷಧಿಯನ್ನು ಖರೀದಿಸಲು ಅನುಮತಿ ಕೊಟ್ಟವರು ಯಾರು?, ಯಾವ ಕಾರಣಕ್ಕಾಗಿ? ಎಂಬುದೂ ಕೂಡ ಹೊರಬರಬೇಕು. ಸರ್ಕಾರಿ ಆಸ್ಪತ್ರೆಗಳಿಗೆ ಹೆರಿಗೆಗಾಗಿ ಬರುವ ಬಡಮಹಿಳೆಯರ ಜೀವವನ್ನು ಅಗ್ಗವಾಗಿ ಪರಿಗಣಿಸಿರುವುದು ಅಕ್ಷಮ್ಯ ಅಪರಾಧ. ಎಷ್ಟೇ ಪ್ರಭಾವಿಗಳಾಗಿದ್ದರೂ ಅವರಿಗೆ ಸರಿಯಾದ ಶಿಕ್ಷೆ ಆಗಲೇಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿಓದಿದ್ದೀರಾ? ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯ ಕೊರತೆ; ₹24 ಲಕ್ಷ ವೆಚ್ಚದಲ್ಲಿ ವಿದೇಶಿ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು

“ಜತೆಗೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಲು ಅವಶ್ಯಕ ವೈದ್ಯರುmaternal deaths, ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಮತ್ತು ಪ್ರಯೋಗಾಲಯಗಳಲ್ಲಿ ಸೂಕ್ತ ಸೌಕರ್ಯಗಳನ್ನು ಒದಗಿಸಬೇಕು. ಅಲ್ಲದೆ, ಆರೋಗ್ಯ ಇಲಾಖೆಯಲ್ಲಿರುವ ಭ್ರಷ್ಟಾಚಾರವನ್ನು ತಡೆಗಟ್ಟಿ, ಜನರ ಮೂಲಭೂತ ಅಗತ್ಯವಾದ ಗುಣಮಟ್ಟದ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಮುಂದಾಗಬೇಕು” ಎಂದು ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ಪರವಾಗಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X