ಉಡುಪಿ | ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆ ಖಂಡಿಸಿ ರೋಗಿಗಳ ಪ್ರತಿಭಟನೆ

Date:

  • ಸಂಜೀವಿನಿ ಎಂಬ ಖಾಸಗಿ ಸಂಸ್ಥೆ ನಿರ್ವಹಣೆಯಲ್ಲಿರುವ ಡಯಾಲಿಸಿಸ್‌ ಕೇಂದ್ರ
  • ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ, ಡಯಾಲೀಸ್ ಕೇಂದ್ರ ಪರಿಶೀಲನೆ

ಉಡುಪಿ ಜಿಲ್ಲಾ ಆಸ್ಪತ್ರೆಯ ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆಯ ವಿರೋಧಿಸಿ ಡಯಾಲಿಸಿಸ್‌ ರೋಗಿಗಳು ಆಸ್ಪತ್ರೆ ಬಳಿ ದಿಢೀರ್ ಪ್ರತಿಭಟನೆ ನಡೆಸಿದರು.

ಡಯಾಲಿಸಿಸ್‌ ಕೇಂದ್ರವನ್ನು ಗುತ್ತಿಗೆ ಪಡೆದಿರುವ ಎಸ್ಕಗ್ ಸಂಜೀವಿನಿ ಸಂಸ್ಥೆಯ ನಿರ್ವಹಣೆ ಕಳಪೆಯಾಗಿದ್ದು, ವ್ಯವಸ್ಥಿತವಾಗಿ ಯಾವುದೂ ನಡೆಯುತ್ತಿಲ್ಲ. ಈ ಸಂಸ್ಥೆಗೆ ಜಿಲ್ಲಾಸ್ಪತ್ರೆ ಆಡಳಿತ ಮಂಡಳಿ ಡಯಾಲಿಸಿಸ್‌ ಕೇಂದ್ರವನ್ನು ಬಿಟ್ಟು ಕೊಡುವಾಗ ಒಟ್ಟು 14 ಡಯಾಲಿಸಿಸ್‌ ಯಂತ್ರಗಳಿದ್ದವು. ಅವುಗಳ ಪೈಕಿ ಪ್ರಸ್ತುತ ಏಳು ಯಂತ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದವು ಹಾಳಾಗಿದ್ದು, ಅದನ್ನು ದುರಸ್ತಿ ಕೂಡ ಮಾಡಿಲ್ಲ. ಅವ್ಯವಸ್ಥೆಯಿಂದ ಕಳೆದ ಒಂದು ವರ್ಷಗಳಲ್ಲಿ ಅಂದಾಜು 30 ರೋಗಿಗಳು ಮೃತಪಟ್ಟಿದ್ದಾರೆ ಎಂದು ಧರಣಿನಿರತರು ಆರೋಪಿಸಿದ್ದಾರೆ.

ಈಗ ಈ ಕೇಂದ್ರದಲ್ಲಿ ಒಟ್ಟು 60 ರೋಗಿಗಳು ಡಯಾಲಿಸಿಸ್‌ ಮಾಡಿಸುತ್ತಿದ್ದಾರೆ. ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೋಗಿಗಳು ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿ, ಶಾಸಕರುಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಯಾಲೀಸಿಸ್ ಗೆ ಸಂಬಂಧಿಸಿ ತುಂಬಾ ಸಮಸ್ಯೆ ಇದೆ. ಸರಿಯಾಗಿ ಕ್ಲೀನ್ ಆಗುತ್ತಿಲ್ಲ. ಡಯಾಲೀಸಿಸ್ ಮಾಡಿದ ನಂತ ಚಳಿ, ವಾಂತಿ ಆಗುತ್ತದೆ. ನಾವು ಪ್ರಶ್ನೆ ಮಾಡಿದರೆ ನಮಗೆ ಉಡಾಫೆಯಿಂದ ಮಾತನಾಡುತ್ತಾರೆ. ಸಿಬ್ಬಂದಿಗಳಿಲ್ಲದೆ ಸಮಯಕ್ಕೆ ಸರಿಯಾಗಿ ಡಯಾಲೀಸ್ ಆಗುತ್ತಿಲ್ಲ. ಅವರು ಏನು ಮಾಡಿದರೂ ನಾವು ಕೇಳಬೇಕು. ಯಾಕೆಂದರೆ ನಾವು ಉಚಿತವಾಗಿ ಮಾಡುವವರು ಎಂಬ ನಿರ್ಲಕ್ಷತನ ಅವರಲ್ಲಿದೆ. ಆದುದರಿಂದ ಸರ್ಕಾರ ಕೂಡಲೇ ಹೊಸ ಯಂತ್ರ ಅಳವಡಿಸಿ ಸರಿಯಾದ ವ್ಯವಸ್ಥೆ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಸೂಚನೆ

ಉಡುಪಿ ಜಿಲ್ಲಾಸ್ಪತ್ರೆಯ ಡಯಾಲೀಸಿಸ್ ರೋಗಿಗಳ ಧರಣಿಯ ಹಿನ್ನೆಲೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಡಯಾಲೀಸ್ ಕೇಂದ್ರವನ್ನು ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಸಂಬಂಧ ಶಾಸಕರು ಜಿಲ್ಲಾ ಸರ್ಜನ್ ಡಾ. ಸುದೇಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಧರಣಿನಿರತ ರೋಗಿಗಳನ್ನು ಸಂತೈಸಿದ ಅವರು, ಇಲ್ಲಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ...

ಚಿತ್ರದುರ್ಗ | ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ; ಮೊಳಕಾಲ್ಮುರು ಪ.ಪಂ. ಅಧಿಕಾರಿಯ ತಲೆದಂಡ

ಸರ್ಕಾರದಿಂದ ಬರ ಘೋಷಣೆಯಾದ ದಿನದಿಂದ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರವಹಿಸಿ,...