ಸುಳ್ಯ | ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ

Date:

Advertisements

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಜಾಧ್ವನಿ ಕರ್ನಾಟಕ ಮತ್ತು ಸುಳ್ಯ ಸರಕಾರಿ ಪದವಿ ಕಾಲೇಜು ಕೊಡಿಯಾಲಬೈಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ, ಕಾಲೇಜಿನ ಸಭಾಂಗಣದಲ್ಲಿ “ಸ್ವಾತಂತ್ರ್ಯ ಮತ್ತು ಸಂವಿಧಾನದ ಮಹತ್ವ” ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಕೆ. ಆರ್. ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ನೆಹರು ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಪೂವಪ್ಪ ಕಣಿಯೂರು ಸಂವಾದವನ್ನು ನಡೆಸಿಕೊಟ್ಟರು.

ಪ್ರಜಾಧ್ವನಿ ಕರ್ನಾಟಕದ ಸದಸ್ಯರಾದ ಅಶೋಕ್ ಎಡಮಲೆಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ದೇಶಕ ಕೆ. ಪಿ. ಜಾನಿ ಹಾಗೂ ಪ್ರಜಾಧ್ವನಿ ಕರ್ನಾಟಕ ಸುಳ್ಯ ಸಂಚಾಲಕ ಗೋಪಾಲ್ ಪೆರಾಜೆ ಸಂದರ್ಭೋಚಿತವಾಗಿ ಮಾತನಾಡಿದರು.

Advertisements
WhatsApp Image 2025 08 16 at 12.35.40 PM

ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ಭ್ರಷ್ಟಾಚಾರ, ಪಕ್ಷಪಾತ, ಮತ್ತು ತಾರತಮ್ಯದಂತಹ ಸಮಾಜದ ಸಮಸ್ಯೆಗಳ ಕುರಿತು ವಿಚಾರ ವಿನಿಮಯ ನಡೆಸಿದರು.

ಕಾರ್ಯಕ್ರಮದಲ್ಲಿ ಪ್ರಜಾಧ್ವನಿ ಕರ್ನಾಟಕ ಸದಸ್ಯರಾದ ದಿವಾಕರ್ ಪೈ, ಶ್ರೀಧರ್ ಕಡೆಪಾಲ, ಕರುಣಾಕರ ಪಲ್ಲತಡ್ಕ, ಪ್ರಕಾಶ್ ಪಾತೆಟ್ಟಿ, ಎ.ಕೆ.ಇಬ್ರಾಹಿಂ, ಭರತ್ ಕುಕ್ಕುಜಡ್ಕ, ವಸಂತ ಪೆಲ್ತಡ್ಕ, ಲಕ್ಷ್ಮೀಶ ಗಬಲಡ್ಕ, ಮಾಧವ ಸುಳ್ಯಕೋಡಿ, ಮಂಜುನಾಥ್ ಮಡ್ತಿಲ, ಸಾಹುಕಾರ್ ಅಶ್ರಫ್, ಪ್ರಮೀಳ ಪೆಲ್ತಡ್ಕ, ಲಲನ ಕೆ.ಅರ್., ಲೆಸ್ಸಿ ಮೊನಾಲಿಸ, ಮಹೇಶ್ ಬೆಳ್ಳಾರ್ಕರ್, ಕೇಶವ ಮೊರಂಗಲ್ಲು, ರಾಜು ಪಂಡಿತ್, ಹಮೀದ್ ಕುತ್ತಮೊಟ್ಟೆ ಮತ್ತು ಲೋಲಾಕ್ಷ ಭೂತಕಲ್ಲು, ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರುಗಳು ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X