ಉಡುಪಿ | ಜನರೇ ರಂಗಭೂಮಿಯನ್ನು ಬೆಳೆಸಬೇಕು – ವೆಂಕಟರಮಣ ಐತಾಳ್

Date:

Advertisements

ನಾಟಕಗಳಿಗೆ, ರಂಗಚಟುವಟಿಕೆಗಳಿಗೆ ಜನರ ಬೆಂಬಲದ ಜೊತೆಗೆ ಸರ್ಕಾರದಿಂದಲೂ ಪ್ರೋತ್ಸಾಹ ದೊರೆಯುತ್ತಿತ್ತು. ಅದು ನಿಂತು ಹೋಗಿದೆ. ಜನರೇ ರಂಗಭೂಮಿಯನ್ನು ಬೆಳೆಸಬೇಕಾದ ಕಾಲದಲ್ಲಿ ನಾವು ಇದ್ದೇವೆ ಎಂದು ಯಕ್ಷ ರಂಗಾಯಣ ಕಾರ್ಕಳ ಇದರ ಅಧ್ಯಕ್ಷ ಬಿ.ಆರ್. ವೆಂಕಟರಮಣ ಐತಾಳ್ ತಿಳಿಸಿದರು.

ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬ ಮೂರನೇ ದಿನದ ಅಧ್ಯಕ್ಷತೆ ವಹಿಸಿ ಅವರು ಮಂಗಳವಾರ ಮಾತನಾಡಿದರು.

ಮಾತಿನ ಮೂಲಕ ಬೆನ್ನು ತಟ್ಟುವುದರ ಜೊತೆಗೆ ಆರ್ಥಿಕ ನೆರವು ಕೂಡ ನೀಡುವ ಮೂಲಕ ರಂಗ ಸಂಸ್ಥೆಗಳನ್ನು ಕಲಾ ಪ್ರೇಮಿಗಳು, ದಾನಿಗಳು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

Advertisements

ರಂಗಭೂಮಿ ಈ ಹಿಂದಿನ ಎಲ್ಲ ಕಾಲಕ್ಕಿಂತ ವೇಗವಾಗಿ ಈಗ ಬೆಳೆಯುತ್ತಿದೆ. ಅದರ ಬೆಳವಣಿಗೆ ಎರಡು ರೀತಿಯಲ್ಲಿ ಆಗುತ್ತಿದೆ. ಸುಮನಸಾ ಕೊಡುವೂರು ಸಂಘಟನೆಯ ರೀತಿಯಲ್ಲಿ ಸಮಾಜದ ಒಳಿತಿಗೆ ಪೂರಕವಾಗಿ ಬೆಳೆಯುವ ಪ್ರಕ್ರಿಯೆ ನಡೆಯಬೇಕು ಎಂದರು.

ನಾಟಕ ಬರೆದವರನ್ನು, ನಿರ್ದೇಶಿಸಿದವರನ್ನು, ಅಭಿನಯಿಸಿದವರನ್ನು ಎಲ್ಲರೂ ಗುರುತಿಸುತ್ತಾರೆ. ಸನ್ಮಾನಿಸುತ್ತಾರೆ. ಆದರೆ, ಹಿನ್ನೆಲೆಯಲ್ಲಿದ್ದುಕೊಂಡು ಕೆಲಸ ಮಾಡುವವರನ್ನು ಗುರುತಿಸುವುದು ಕಡಿಮೆ. ನೇಪಥ್ಯದಲ್ಲಿ ಇರುವವರನ್ನೂ ಗುರುತಿಸುವ ಮೂಲಕ ವಿಶಿಷ್ಠ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ ಮಾತನಾಡಿ, ಕಲಾವಿದರಿಗೆ ಜಾತಿ, ಮತ, ಪಂಥ, ಲಿಂಗದ ಭೇದ ಇರುವುದಿಲ್ಲ. ನಾಟಕದಲ್ಲಿ ಹೆಣ್ಣು ಗಂಡಾಗಬಹುದು. ಗಂಡು ಹೆಣ್ಣಾಗಬಹುದು. ನಾಟಕವು ಮನರಂಜನೆ ಮಾತ್ರವಾಗದೇ ಅರಿವು ಮೂಡಿಸುವ ಸಮಾಜಕ್ಕೆ ದಿಕ್ಕು ತೋರಿಸುವ ಪ್ರಕ್ರಿಯೆ ಎಂದು ಹೇಳಿದರು.

ರಂಗಸನ್ಮಾನ ಪಡೆದ ರಾಜು ಕಡೆಕಾರ್ ಅವರು ಕವನ ವಾಚನದ ಮೂಲಕ ಕೃತಜ್ಞತೆ ಸಲ್ಲಿಸಿದರು. ನಿರ್ಮಿತಿ ಕೇಂದ್ರದ ನಿರ್ದೇಶಕ ದಿವಾಕರ ಪೂಜಾರಿ ಅಂಬಲಪಾಡಿ, ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲಿಯಾನ್, ಕಲ್ಯಾಣಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೃಷ್ಣ ದೇವಾಡಿಗ, ಮಲ್ಪೆಯ ಉದ್ಯಮಿ ರವಿರಾಜ್ ತಿಂಗಳಾಯ, ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಕುಂದರ್ ಸ್ವಾಗತಿಸಿದರು. ಚಂದ್ರಕಾಂತ್ ಕಲ್ಮಾಡಿ ವಂದಿಸಿದರು. ರಾಧಿಕಾ ದಿವಾಕರ್ ಮತ್ತು ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಅನಿಕೇತನ ಹಾಸನ ಕಲಾವಿದರು ‘ಕಿರಗೂರಿನ ಗಯ್ಯಾಳಿಗಳು” ನಾಟಕ ಪ್ರದರ್ಶಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X