ಉಡುಪಿ | ದಲಿತ ಸಮುದಾಯಕ್ಕೆ ತೊಂದರೆಯಾದರೆ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಸುಂದರ್ ಮಾಸ್ಟರ್

Date:

ಉಡುಪಿಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ಇಂದು ತುರ್ತು ಸಭೆ ನಡೆಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಮಲ್ಪೆಯಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿ ದೌರ್ಜನ್ಯ ಎಸಗಿದ ಹೀನ ಕ್ರತ್ಯವನ್ನು ಸಮರ್ಥಿಸಿಕೊಳ್ಳುತ್ತಿರುವ ಪ್ರಮೋದ್ ಮಧ್ವರಾಜ್ ಮತ್ತು ರಘುಪತಿ ಭಟ್ ರಂತ ರಾಜಕಾರಣಿಗಳ ಕೀಳು ಮನಸ್ಥಿತಿಯ ಅನಾವರಣ ಮಾಡಿದ್ದಾರೆ. ರಾಜಕೀಯವಾಗಿ ತಮ್ಮ ಟಿಆರ್ ಪಿ ಯನ್ನು ಹೆಚ್ಚಿಸಿಕೊಳ್ಳಲು ಸ್ಪರ್ಧೆಗೆ ಬಿದ್ದವರಂತೆ ಮಾತನಾಡುವ ಈ ರಾಜಕಾರಣೀಗಳು ಮೊಗವೀರ ಸಮೂದಾಯವನ್ನು ದಲಿತರ ವಿರುದ್ಧ ರೊಚ್ಚಿಗೇಳುವಂತೆ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದಾರೆ ಮಾತ್ರವಲ್ಲ ಅಸ್ಪೃಶ್ಯ ಸಮುದಾಯಕ್ಕೆ ಬೆದರಿಕೆ ಹಾಕುವ ಕಾರ್ಯವನ್ನೂ ಮಾಡುತ್ತಿದ್ದಾರೆ ಎಂದರು. ಈ ರೀತಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಮೋದ್ ಮಧ್ವರಾಜ್ ಮೇಲೆ ಸುಮೊಟೋ ಕೇಸ್ ದಾಖಲಿಸಿದ ಪೋಲೀಸ್ ಇಲಾಖೆಯನ್ನು ಅಬಿನಂಧಿಸಿದರು.

- Advertisement -
1004795277

ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಮಾತನಾಡಿ ಬಂದರಿನಲ್ಲಿ ಕೆಲಸ ಮಾಡುವ ದಲಿತ ಸಮುದಾಯದವರಿಗೆ ತೊಂದರೆ ಆದರೆ ಸುಮ್ಮನೇ ಕೂರುವ ಪ್ರಶ್ನೆಯೇ ಇಲ್ಲ, ಈಗಾಗಲೇ ಲಂಬಾಣಿ ಸಮುದಾಯದವರನ್ನು ಬಂದರಿನಿಂದ ಮೊಗವೀರರು ಓಡಿಸುತ್ತಿರುವ, ಬೆದರಿಕೆ ಹಾಕುತ್ತಿರುವ ಸುದ್ದಿ ಬಂದಿದೆ, ಜಿಲ್ಲಾಡಳಿತ, ಪೋಲಿಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು. ಪ್ರತಿಭಟನೆಯಲ್ಲಿ ಕಿರುಚಾಡಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಹೆಸರು ಪ್ರಸ್ತಾಪಿಸಿ ಬೈಯ್ಯುವ ಬದಲು ಯಾವುದೇ ಚಾನಲ್ ನಲ್ಲಿ ಚರ್ಚೆಗೆ ಬಂದರೆ ನಿಮಗೆ ಸರಿಯಾದ ಉತ್ತರ ಕೊಡಲು ನಾವು ಮೂವರೂ ತಯಾರಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ದೇಶದ ಯಾವುದೇ ಮೂಲೆಯಲ್ಲಿ ಶೋಷಿತರ ಮೇಲೆ ದೌರ್ಜನ್ಯಗೊಳಗಾದಗ ಅದರ ವಿರುದ್ಧ ಹೋರಾಡುವುದು ಒಂದು ಪ್ರಗತಿಪರ ಸಂಘಟನೆಯಾದ ನಮ್ಮ ಆದ್ಯ ಕರ್ತವ್ಯ ಎಂದರು.

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಮಾತನಾಡಿ ಮಲ್ಪೆ ಬಂದರು ಯಾರೊಬ್ಬರ ಸ್ವಂತ ಆಸ್ತಿ ಅಲ್ಲಾ, ಬಂದರು ಸರಕಾರದ ಸ್ವತ್ತು, ಅಲ್ಲಿ ಎಲ್ಲರಿಗೂ ದುಡಿದು ತಿನ್ನುವ ಹಕ್ಕಿದೆ, ಪಾಳೇಗಾರಿಕೆ ಮಾಡಲು ಇದು ಉತ್ತರ ಪ್ರದೇಶ ಅಥವಾ ಬಿಹಾರ ಅಲ್ಲಾ. ಮಲ್ಪೆ ಘಟನೆಯಲ್ಲಿ ಮಾನ್ಯ ಪೋಲಿಸ್ ವರಿಷ್ಠಾಧಿಕಾರಿ ಡಾ: ಅರುಣ ಕುಮಾರ್ ರವರು ಕ್ಲಪ್ತ ಸಮಯಕ್ಕೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ ಅವರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಅಭಿನಂಧಿಸುತ್ತದೆ. ಮತ್ತು ಈ ನ್ಯಾಯಯುತ ಹೋರಾಟದಲ್ಲಿ ದಲಿತ ಸಂಘರ್ಷ ಸಮಿತಿಯು ಪೋಲಿಸ್ ವರಿಷ್ಠಾಧಿಕಾರಿಯವರ ಬೆಂಬಲಕ್ಕೆ ನಿಲ್ಲುತ್ತದೆ.

ಬುಧ್ಧಿವಂತರ ಸಹಬಾಳ್ವೆಯ ಜಿಲ್ಲೆಯಾದ ಉಡುಪಿಯಲ್ಲಿ ಈ ಪಾಳೇಗಾರಿಕೆಯ ಗುಂಡಾಗಿರಿ ಸಂಪೂರ್ಣವಾಗಿ ಹತ್ತಿಕ್ಕಬೇಕು ಎಂದರು. ಸಭೆಯಲ್ಲಿ ದ.ಸಂ.ಸ.ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ್ ತೆಕ್ಕಟ್ಟೆ, ರಾಜೇಂದ್ರ ಮಾಸ್ಟರ್ ಬೆಳ್ಳೆ, ಮಂಜುನಾಥ ನಾಗುರು, ಸುರೇಶ ಹಕ್ಲಾಡಿ, ಭಾಸ್ಕರ ಮಾಸ್ಟರ್, ಶ್ರೀಧರ ಕುಂಜಿಬೆಟ್ಟು, ಅಣ್ಣಪ್ಪ ನಕ್ರೆ, ತಾಲೂಕು ಸಂಚಾಲಕರಾದ ರಾಜು ಬೆಟ್ಟಿನಮನೆ, ಮಂಜುನಾಥ್ ಬಾಳ್ಕುದ್ರು, ರಾಘವ ಬೆಳ್ಳೆ, ಹರೀಶ್ಚಂದ್ರ ಬಿರ್ತಿ, ಶಿವರಾಮ ಕಾಪು, ಕುಸುಮ ಹಂಗಾರಕಟ್ಟೆ, ಶಿವಾನಂದ ಬಿರ್ತಿ, ರಮೇಶ ಮರವಂತೆ, ಕ್ರಷ್ಣ, ಸುರೇಶ ಬಾರ್ಕೂರು, ಶಿವರಾಜ್ ಬೈಂದೂರು, ರತ್ನಾಕರ ಕುಂಜಿಬೆಟ್ಟು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...