ಪ್ರಚೋದನಾಕಾರಿ ಭಾಷಣ | ಭಜರಂಗದಳ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಿದ ಕಾರ್ಕಳ ಪೊಲೀಸರು

Date:

Advertisements
  • ಭಜರಂಗದಳದ ಮುಖಂಡ ಪುನೀತ್ ಅತ್ತಾವರ, ಸಂಪತ್ ವಿರುದ್ಧ ಎಫ್ಐಆರ್
  • ಗೋವು ಕಡಿಯುವವರ ಕೈ ಕಡಿಯಲು ಕರೆ ನೀಡಿದ್ದ ವಿಡಿಯೋ ವೈರಲ್

ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಭಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಭಜರಂಗದಳದ ಮಂಗಳೂರು ವಿಭಾಗದ ಸಹ ಸಂಯೋಜಕ ಪುನೀತ್‌ ಅತ್ತಾವರ ಹಾಗೂ ಕಾರ್ಕಳ ನಗರ ಬಜರಂಗದಳ ಸಂಚಾಲಕ ಸಂಪತ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ. 13ರಂದು ಕಾರ್ಕಳ ನಗರ ಬಜರಂಗದಳ ವತಿಯಿಂದ ಕಾರ್ಕಳದಲ್ಲಿ ನಡೆದ ಪಂಜಿನ ಮೆರವಣಿಗೆ ಸಭಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಪುನೀತ್‌ ಅತ್ತಾವರ, ‘ಬ್ಯಾರಿ(ಕರಾವಳಿಯ ಮುಸಲ್ಮಾನರು) ಯಾವ ಕೈಯಿಂದ ಗೋಮಾತೆಯನ್ನು ಕಡಿಯುತ್ತಾನೋ, ಅವನ ದೇಹದಿಂದ ಅದೇ ಕೈಯನ್ನು ಬೇರ್ಪಡಿಸುವ ಸಂಕಲ್ಪ ತೊಡಬೇಕು’ ಎಂದು ಪ್ರಚೋದನಕಾರಿ ಹೇಳಿದ ನೀಡಿದ್ದರು. ಈ ಹೇಳಿಕೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.

Advertisements

ಪುನೀತ್ ಅತ್ತಾವರ ಅವರ ಭಾಷಣದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮ ಮತ್ತು ವಾಟ್ಸ್​ಆ್ಯಪ್‌ನಲ್ಲಿ ಹರಿದಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ತಕ್ಷಣ, ಪೊಲೀಸರು ಕ್ರಮ ಕೈಗೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X