ಧಾರವಾಡ | 15 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ: ಮಧ್ಯ ರಾತ್ರಿ ಮಹಿಳೆಯರಿಂದ ರಸ್ತೆ ತಡೆ ಪ್ರತಿಭಟನೆ

Date:

Advertisements
  • ರಾಜ್ಯ ಸರ್ಕಾರ, ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ
  • ಎರಡು ಗಂಟೆ ಕಾಲ ರಸ್ತೆ ತಡೆ; ಪಿ.ಬಿ ರಸ್ತೆಯಲ್ಲಿ ಸಂಚಾರ ದಟ್ಟಣೆ

ಬೇಸಿಗೆ ಆರಂಭವಾಗುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಧಾರವಾಡದ ಕೆಲಗೇರಿ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತಡರಾತ್ರಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮೊದಲು ವಾರಕ್ಕೊಮ್ಮೆ ಬರುತ್ತಿದ್ದ ನೀರು ಈಗ ಹದಿನೈದು ದಿನಗಳಿಗೊಮ್ಮೆ, ಒಂದೊಂದು ಕಡೆ ತಿಂಗಳಿಗೊಮ್ಮೆ ಬರುವಂತಾಗಿದೆ. ಇದರಿಂದ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆಯ ಗಂಭೀರತೆ ಅರಿತು ಅದನ್ನು ನಿವಾರಿಸಬೇಕಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹುಬ್ಬಳ್ಳಿ ಧಾರವಾಡ ಅವಳಿ ನಗರದ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜವಾಬ್ದಾರಿ ಜಲಮಂಡಳಿಯಿಂದ ಖಾಸಗಿ ‘ಎಲ್ ಆ್ಯಂಡ್ ಟಿ’ ಕಂಪನಿಗೆ ನೀಡಿ ಪಾಲಿಕೆ ಕೈತೊಳೆದುಕೊಂಡಿತ್ತು. ಈ ಪ್ರಕ್ರಿಯೆ ನಡೆದು ಆರೇಳು ತಿಂಗಳುಗಳೇ ಕಳೆದಿದೆ. ಆದರೆ, ನೀರು ಪೂರೈಸುವ ಜವಾಬ್ದಾರಿ ಹೊತ್ತ ಎಲ್ಆಂಡ್ ಟಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲ” ಎಂದು ಸ್ಥಳೀಯರು ಆರೋಪಿಸಿದರು.

“ಒಡೆದ ಪೈಪ್ ಲೈನ್‌ಗಳ ದುರಸ್ತಿ ಮಾಡುತ್ತಿಲ್ಲ. ಈಗಾಗಲೇ ಜಲಮಂಡಳಿ ಮೂಲಕ ನೀರು ಪೂರೈಸುತ್ತಿದ್ದ ಸಿಬ್ಬಂದಿ ಕೆಲಸದಿಂದ ತೆಗೆದುಹಾಕಿದೆ. ಆದರೆ, ಆ ಜಾಗಕ್ಕೆ ಮತ್ತೆ ಸಿಬ್ಬಂದಿ ನೇಮಕಗೊಂಡಿಲ್ಲ. ಇದರಿಂದ ನೀರು ಪೂರೈಕೆ ಹಲವು ಸಮಸ್ಯೆ ಎದುರಾಗುತ್ತಲೇ ಇದೆ. ಅಧಿಕಾರಿಗಳು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಆದರೆ, ನಲ್ಲಿಯಲ್ಲಿ ನೀರು ಮಾತ್ರ ಬರುತ್ತಿಲ್ಲ. ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜನಪ್ರತಿನಿಧಿಗಳು ಕೂಡಲೇ ತಮ್ಮ ಸಂಕಷ್ಟಕ್ಕೆ ಸ್ಪಂದಿಸಬೇಕು” ಎಂದು ಕೆಲಗೇರಿ ಜನರ ಆಗ್ರಹಿಸಿದ್ದಾರೆ.

“ಸಮಯಕ್ಕೆ ಸರಿಯಾಗಿ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ತೀವ್ರವಾದ ಪ್ರತಿಭಟನೆ ಮಾಡಲಾಗುವುದು” ಎಂದು ಪ್ರತಿಭಟನಕಾರರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕುಡಿಯಲು ನೀರು ಸರಬರಾಜು ಮಾಡುವವರೆಗೂ ರಸ್ತೆ ತಡೆ ನಡೆಸುವುದಾಗಿ ಪಟ್ಟು ಹಿಡಿದರು.

ಸಾರ್ವಜನಿಕರು ಪಿ.ಬಿ ರಸ್ತೆಯ ಮೇಲೆ ಕುಳಿತು ರಸ್ತೆ ತಡೆ ಮಾಡಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸುಮಾರು ಎರಡು ಗಂಟೆಗೂ ಅಧಿಕ ಕಾಲ ನೂರಾರು ವಾಹನಗಳು ರಸ್ತೆಯಲ್ಲಿ ನಿಂತಿದ್ದವು. ವಾಹನ ದಟ್ಟಣೆ ಹೆಚ್ಚಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ, ಸಂಚಾರ ದಟ್ಟಣೆಯನ್ನು ನಿವಾರಿಸಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X