ತುಮಕೂರು | ಜನ ವಿರೋಧಿ ಬಿಜೆಪಿ ಸೋಲಿಸಲು ಕಾಂಗ್ರೆಸ್‌ ಬೆಂಬಲಿಸಿ: ಗುರುಪ್ರಸಾದ್ ಕೆರಗೋಡು

Date:

  • ಕಾನೂನು ಸುವ್ಯವಸ್ಥೆ ಕುಸಿದು ಅನೈತಿಕ ಪೊಲೀಸ್‌ ಗಿರಿ ರಾರಾಜಿಸುತ್ತಿದೆ
  • ದಸಂಸ ಐಕ್ಯ ಹೋರಾಟ ಚಾಲನ ಸಮಿತಿ ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ

ದಲಿತರು, ದಮನಿತರು, ರೈತರು, ಅಲ್ಪಸಂಖ್ಯಾತರು ಸೇರಿದಂತೆ ಜನವಿರೋಧಿ ಬಿಜೆಪಿ ಸರ್ಕಾರವನ್ನು ಸೋಲಿಸಿ ಮನೆಗೆ ಕಳಿಸಬೇಕಾಗಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮನವಿ ಮಾಡಿದರು.

- Advertisement -

ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಬಿಜೆಪಿ ಮತ್ತು ಮೋದಿ ಸರ್ಕಾರ ದಲಿತ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ. ದೇಶದಲ್ಲಿ ಅತ್ಯಂತ ಸಮರ್ಥ ಜನ ಚಳವಳಿಗಳಲ್ಲಿ ದಲಿತ ಸಂಘರ್ಷ ಸಮಿತಿಯು ವಿಶಿಷ್ಟವಾಗಿ ನಿಲ್ಲುತ್ತದೆ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಾರತದ ಸಂವಿಧಾನ ನಮ್ಮ ದಲಿತ ಸಂಘರ್ಷ ಸಮಿತಿಯ ಜೀವಾಳ ಮತ್ತು ಅಂಬೇಡ್ಕರ್ ಸಿದ್ಧಾಂತವೇ ನಮ್ಮ ಸಿದ್ಧಾಂತ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನೋಟು ರದ್ಧತಿ, ಜಿಎಸ್‌ಟಿ ಜಾರಿಗೊಳಿಸಿ ಜನರು ನರಳುವಂತೆ ಆಯಿತು. ಬೆಲೆ ಏರಿಕೆ, ಕೋಮುದಳ್ಳುರಿ, ಭಯೋತ್ಪಾದನೆ ವಿಪರೀತ ಜಾತಿ ದೌರ್ಜನ್ಯಗಳಿಂದ ಬಡವರು ನೋವು ತಿಂದರು. ಕಳೆದ ಒಂಬತ್ತು ವರ್ಷಗಳಲ್ಲಿ ದೇಶದ ಜನಸಾಮಾನ್ಯರು ನರಕ ನೋಡಿದ್ದಾರೆ. ಅದರಲ್ಲೂ ದಲಿತರು ರೌರವ ನರಕ ಅನುಭವಿಸಿದ್ದಾರೆ ಎಂದು ಹೇಳಿದರು.

ದೇಶ ಮತ್ತು ರಾಜ್ಯದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕುಸಿದು ಬಿದ್ದು ಅನೈತಿಕ ಪೊಲೀಸ್‌ ಗಿರಿ ರಾರಾಜಿಸುತ್ತಿದೆ. ಕಾರ್ಯಾಂಗದಲ್ಲಿ ಸಂಘ ಪರಿವಾರದ ಮನಸ್ಥಿತಿಗಳು ಸ್ವಜನ ಪಕ್ಷಪಾತಿಗಳಾಗಿದ್ದಾರೆ. ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳೆಲ್ಲವೂ ಆಡಳಿತ ಬಿಜೆಪಿ ಸರ್ಕಾರದ ಅಣತಿಯಂತೆ ವರ್ತಿಸುತ್ತಿವೆ ಎಂದು ಟೀಕಿಸಿದರು.

ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಜನದ್ರೋಹಿ ಆರ್.ಎಸ್.ಎಸ್ ಬಿಜೆಪಿಯನ್ನು ಹಿಮ್ಮೆಟ್ಟಿಸಲು ಕಾಂಗ್ರೆಸ್‌ಗೆ ಷರತ್ತುಬದ್ಧ ಬೆಂಬಲ ನೀಡಲು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಚಾಲನ ಸಮಿತಿ ತೀರ್ಮಾನಿಸಿದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು ಜಿಲ್ಲೆ | ಬಿಜೆಪಿಗೆ ಮುಳುವಾಗಲಿದೆಯೇ ಬಂಡಾಯ– ಆಡಳಿತ ವಿರೋಧಿ ಅಲೆ?

ಜನಪರ ಚಿಂತಕ ಮತ್ತು ಹಿರಿಯ ದಲಿತ ಮುಖಂಡ ಕೆ ದೊರೆರಾಜ್ ಮಾತನಾಡಿ, ಬಿಜೆಪಿ ಸರ್ಕಾರ ದಲಿತ, ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ದೇಶ ಮತ್ತು ರಾಜ್ಯದಲ್ಲಿ ಸಾಮರಸ್ಯವನ್ನು ಹಾಳು ಮಾಡುತ್ತಿದೆ. ಅಷ್ಟೇ ಅಲ್ಲ ಆರ್.ಎಸ್.ಎಸ್ ಮತ್ತು ಬಿಜೆಪಿ ಜನರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿದೆ. ಇಂತಹ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳನ್ನು ಕಿತ್ತೊಗೆಯಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮಾವಳ್ಳಿ ಶಂಕರ್, ಜನಪರ ಚಿಂತಕ ಕೆ ದೊರೈರಾಜ್, ಮುಖಂಡರಾದ ಎಂ ಸೋಮಶೇಖರ್, ಎನ್ ವೆಂಕಟೇಶ್ ಕೋಲಾರ, ಡಾ. ಡಿ ಮುರಳೀಧರ್, ಜೈಮೂರ್ತಿ, ಡಿ ಭಾರತ್ ಕುಮಾರ್ ಬೆಲ್ಲದಮಡು, ರಾಮಾಂಜನೇಯ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...