ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ : ಜನಾರ್ದನ ರೆಡ್ಡಿ

Date:

  • 13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ
  • ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಲಿದೆ

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಏನಾದರೂ ಇದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

- Advertisement -

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಳಿಯ ಮತಗಟ್ಟೆ ಸಂಖ್ಯೆ 155ರಲ್ಲಿ ಮತದಾನ ಮಾಡಿದ ಜನಾರ್ದನ ರೆಡ್ಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

“ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಸಂದರ್ಭ ಇದೆ. ಕಾಂಗ್ರೆಸ್ ಬೆಂಬಲಿಸಲು ಕೇಳಿದರೆ, ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಬಂದರೆ ಖಂಡಿತವಾಗಿ ಬೆಂಬಲ ಸೂಚಿಸಲಾಗುವುದು” ಎಂದು ತಿಳಿಸಿದ್ದಾರೆ.

“ನಗರದ ಆರಾಧ್ಯದೈವ ಚೆನ್ನ ಬಸವ ತಾತನ ಹಾಗೂ ಗ್ರಾಮದೇವತೆ ದುರ್ಗಾದೇವಿ ಆಶೀರ್ವಾದ ಪಡೆದು ಬಂದಿದ್ದು, ವಿಧಾನಸಭಾ ಕ್ಷೇತ್ರದ ಮತದಾರರು ಕೆಆರ್‌ಪಿಪಿಗೆ ಬೆಂಬಲಿಸಿ ಮತದಾನ ನೀಡುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ಕರ್ತವ್ಯ | ಆಶಾ ಕಾರ್ಯಕರ್ತೆಯರಿಗೆ ಸಿಗದ ಗೌರವಧನ

“ಬಳ್ಳಾರಿ ನಗರದಲ್ಲಿ ಕೆಆರ್‌ಪಿಪಿ ಅಭ್ಯರ್ಥಿ ಅರುಣಾ ಲಕ್ಷ್ಮಿ ಸಹ ಗೆಲುವು ಸಾಧಿಸಲಿದ್ದಾರೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಬಾರಿ ಅಂತರದಿಂದ ಗೆಲುವು ಸಾಧಿಸಲಿದ್ದೇನೆ. 13 ಕ್ಷೇತ್ರಗಳಲ್ಲಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದ್ದು, ಉಳಿದ ಕ್ಷೇತ್ರದಲ್ಲಿ ಪೈಪೋಟಿ ಇದೆ” ಎಂದು ಹೇಳಿದ್ದಾರೆ.

ಈ ವೇಳೆ ಕೆಆರ್‌ಪಿಪಿ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ರಾಜೇಶ ರೆಡ್ಡಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಬಸವನ ಬಾಗೇವಾಡಿ | ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪತ್ರ ಚಳವಳಿ

ಶಾಸನಬದ್ಧವಾಗಿ ನಿಗದಿಪಡಿಸಿರುವ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ...

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...