ಉಡುಪಿ | ಅಮೆರಿಕದ ಜಗಳಗಂಟ ತಂತ್ರಗಳನ್ನು ಪ್ರತಿರೋಧಿಸಿ – ಸಿಪಿಎಂ

Date:

ಭಾರತೀಯ ರಪ್ತುಗಳ ಮೇಲೆ ಶೇ. 50 ರಷ್ಟು ಸುಂಕಗಳನ್ನು ವಿಧಿಸಿರುವುದಕ್ಕಾಗಿ ಸಿಪಿಐ(ಎಂ) ಪೊಲಿಟ್ ಬ್ಯೂರೋ ಅಮೆರಿಕವನ್ನು ಬಲವಾಗಿ ಖಂಡಿಸಿದೆ. ಈ ಏಕಪಕ್ಷೀಯ ನಡೆ ಸ್ವೇಚ್ಛಾಚಾರಿ, ಸರ್ವಾಧಿಕಾರಿ ನಡೆ ಮತ್ತು ಅಮೆರಿಕದ ಆಡಳಿತದ ಜಗಳಗಂಟ ತಂತ್ರಗಳನ್ನು ಬಿಂಬಿಸುತ್ತದೆ ಎಂದು ಅದು ಹೇಳಿದೆ.

- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಸ್ತುತ ನಡೆಯುತ್ತಿದ್ದ ವ್ಯಾಪಾರ ಮಾತುಕತೆಗಳ ಸಮಯದಲ್ಲಿ ಅಮೆರಿಕ ಮುಂದಿಟ್ಟ ಎಲ್ಲಾ ಬೇಡಿಕೆಗಳನ್ನು ಸ್ವೀಕರಿಸದಿದ್ದಕ್ಕಾಗಿ ಭಾರತೀಯ ರಫ್ತುಗಳ ಮೇಲೆ ಶೇಕಡಾ 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಪ್ರಕಟಿಸಿದ್ದರು. ಇದರ ಜೊತೆಗೆ, ಭಾರತವು ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ದಂಡವಾಗಿ ಹೆಚ್ಚುವರಿ ಶೇಕಡಾ 25 ರಷ್ಟು ವಿಧಿಸಲಾಗಿದೆ. ಸ್ವತಃ ಯುಎಸ್‍ ಮತ್ತು ಯುರೋಪಿಯನ್ ಒಕ್ಕೂಟವೇ ರಷ್ಯಾದೊಂದಿಗೆ ವ್ಯಾಪಾರ ಸಂಬಂಧಗಳನ್ನು ಮುಂದುವರಿಸುತ್ತಿರುವಾಗ, ಭಾರತದಂತಹ ದೇಶಗಳು ರಷ್ಯಾದೊಂದಿಗೆ ವ್ಯಾಪಾರ ಸಂಬಂಧಗಳನ್ನು ಮುಂದುವರಿಸಿದ್ದಕ್ಕಾಗಿ ಅವುಗಳ ಕೈತಿರುಚಲು ಪ್ರಯತ್ನಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಭಾರತ ಸರ್ಕಾರವು ದೃಢವಾಗಿ ನಿಂತು ಅಮೆರಿಕದ ಒತ್ತಡಕ್ಕೆ ಮಣಿಯುದೆ ಅದನ್ನು ಪ್ರತಿರೋಧಿಸಬೇಕೆಂದು ಸಿಪಿಐ(ಎಂ) ಆಗ್ರಹಿಸಿದೆ. ಈ ಸುಂಕ ಹೆಚ್ಚಳಗಳಿಂದಾಗಿ ಪ್ರತಿಕೂಲ ಪರಿಣಾಮಗಳನ್ನು ಎದುರಿಸಬೇಕಾಗಿರುವ ಭಾರತೀಯ ರಫ್ತುದಾರರ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅದು ಹೇಳಿದೆ.

ಅಮೆರಿಕದ ಜಗಳಕೋರತನದ ವಿರುದ್ಧ ಮತ್ತು ನಮ್ಮ ದೇಶದ ಆರ್ಥಿಕ ಸಾರ್ವಭೌಮತ್ವವನ್ನು ರಕ್ಷಿಸಲು ತಕ್ಷಣ ಪ್ರತಿಭಟನೆಗಳನ್ನು ಸಂಘಟಿಸಬೇಕು ಎಂದು ಸಿಪಿಐ(ಎಂ) ತನ್ನ ಎಲ್ಲಾ ಘಟಕಗಳಿಗೆ ಕರೆ ನೀಡಿರುವ ಭಾಗವಾಗಿ ಉಡುಪಿಯಲ್ಲಿಯೂ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...