ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ

Date:

ಐತಿಹಾಸಿಕ ಸ್ಮಾರಕಗಳ ಸ್ವಚ್ಛತೆ ಕಾಪಾಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲೆಯ ಸುರಪುರ ಮಹರ್ಷಿ ವಾಲ್ಮೀಕಿ ಆರ್.ಸಿ ನಾಯಕ ಜನಸೇವೆ ಶೈಕ್ಷಣಿಕ ಟ್ರಸ್ಟ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಬಳಿಕ ಸುರಪುರ ನಗರಸಭೆಯ ಪೌರಾಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು.

- Advertisement -

ಈ ವೇಳೆ ಮಾತನಾಡಿದ ಜನಸೇವೆ ಶೈಕ್ಷಣಿಕ ಟ್ರಸ್ಟ್ ಅಧ್ಯಕ್ಷ ರಾಜಾ ಚನ್ನಪ್ಪ ನಾಯಕ, ಸುರಪುರದ ಐತಿಹಾಸಿಕ ವೃತ್ತವಾದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಬಲವಂತ ಬಹರಿ ಬಹದ್ದೂರ ಪ್ರತಿಮೆಯ ಐತಿಹಾಸಿಕ ವ್ಯಕ್ತಿಯ ವೃತ್ತದ ಸುತ್ತಲು ಸ್ವಚ್ಚತೆ ಹಾಗೂ ನೀರಿನ ವ್ಯವಸ್ಥೆ ಇಲ್ಲ. ಬಹದ್ದೂರ ಪ್ರತಿಮೆಯ ವೃತ್ತದ ಸುತ್ತಲೂ ಜಾಹೀರಾತುಗಳ ಪೋಸ್ಟರ್‌ಗಳನ್ನು ಹಚ್ಚಿ ಅದರ ಅಂದವನ್ನು ಹಾಳು ಮಾಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಈ ಬಗ್ಗೆ ಸುರಪುರ ನಗರಸಭೆಯ ಅಧಿಕಾರಿಗಳು ಗಮನ ಹರಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

‘ಸುರಪುರದಿಂದ ವೆಂಕಟಾಪೂರಕ್ಕೆ ಹೋಗುವ ಮಾರ್ಗದಲ್ಲಿ ಡಿಗ್ನಿ ಅಗಸಿ ಹತ್ತಿರ ಸ್ಥಳೀಯರು ಮಣ್ಣು, ಕಸ ಹಾಗೂ ಇತರೆ ತ್ಯಾಜ್ಯ ವಸ್ತುಗಳನ್ನು ತಂದು ಹಾಕಿ ಅದನ್ನು ಕಾಣದಂತೆ ಮಾಡುತ್ತಿದ್ದಾರೆ. ಕೂಡಲೆ ನಗರಸಭೆಯವರು ಅದನ್ನು ತೆಗೆಸಲು ಕಾರ್ಯ ಪ್ರವೃತ್ತರಾಗಬೇಕು. ತಕ್ಷಣವೇ ಈ ಕೆಲಸಗಳನ್ನು ಕೈಗೊಂಡು ಸ್ಮಾರಕಗಳ ಅಂದವನ್ನು ಹೆಚ್ಚುವಂತಹ ಕೆಲಸ ಮಾಡಬೇಕು” ಎಂದು ಅಗ್ರಹಿಸಿ, ಮನವಿ ಪತ್ರ ಸಲ್ಲಿಸಿದರು.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ತಿಂಗಳಾದರೂ ಮುಗಿಯದ ಚರಂಡಿ‌ ಕಾಮಗಾರಿ: ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ, ಜನಪ್ರತಿನಿಧಿಗಳು

ಈ ಸಂದರ್ಭದಲ್ಲಿ ರಾಜಾ ದೇವಿಂದ್ರ ನಾಯಕ, ಆಬಿದ್ ಹುಸೇನ್ ಪಗಡಿ, ಯಂಕಪ್ಪ ಕೋಸಗಿ, ಶರೀಫ್.ಎಮ್, ಶ್ರೀಕಾಂತ್ ಹೂಗಾರ, ಹಣಮಂತ್ರಾಯ ಕಬಾಡಗೇರಾ, ಮಹದೇವಪ್ಪ ಮಡಿವಾಳ್, ಮೆಹಬೂಬ್ ಪಟೇಲ್, ಸಾಲೇ ಸಾಬ್ ಅಗ್ನಿ, ಮಲ್ಲಪ್ಪ, ಪರಶುರಾಮ್, ವನ್ನಪ್ಪ, ಅಯ್ಯಪ್ಪ, ಈಶಪ್ಪ, ಬಸವರಾಜ್ ಗುಂಡಗುರ್ತಿ, ಮಲ್ಲಣ್ಣ ಗುಂಡಗುರ್ತಿ, ಕಲ್ಯಾಣಿ ಸ್ವಾಮಿ,ಚನ್ನಬಸಯ್ಯ ಹಿರೇಮಠ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...