ಬೀದರ್‌ | ಬಸವಕಲ್ಯಾಣದಲ್ಲಿ ಅ.19, 20ರಂದು ʼಸ್ವಾಭಿಮಾನಿ ಕಲ್ಯಾಣ ಪರ್ವʼ

Date:

Advertisements

ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅಕ್ಟೋಬರ್ 19 ಮತ್ತು 20 ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ ಎಂದು ಬೆಂಗಳೂರಿನ ಬಸವ ಗಂಗೋತ್ರಿಯ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಡಾ.ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

ಬೀದರ್‌ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ʼ ಕಲ್ಯಾಣ ಪರ್ವದಲ್ಲಿ ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಬಸವ ಭಕ್ತರು ಪಾಲ್ಗೊಳ್ಳುತ್ತಿದ್ದಾರೆʼ ಎಂದರು.

ʼಅ.19 ರಂದು ಬೆಳಿಗ್ಗೆ 5 ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜೆ, ನಂತರ 11 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಸವ ಚಿಂತನ ಪ್ರಭೆಯ ಮೂಲಕ ವೇದಿಕೆಯ ದೈವೀಕರಣ ನಡೆಯಲಿದೆ. ಸಂಜೆ 5 ಕ್ಕೆ ಧರ್ಮಚಿಂತನ ಗೋಷ್ಠಿ-1 ಜರುಗಲಿದೆ. ಅ.20 ರಂದು ಬೆಳಿಗ್ಗೆ 8ಕ್ಕೆ ಸಾಮೂಹಿಕ ಪ್ರಾರ್ಥನೆ, ಇಷ್ಟಲಿಂಗ ಪೂಜೆ ಹಾಗೂ ಬೆ.10:30 ಕ್ಕೆ ಶರಣ ವಂದನೆ 770 ಶರಣರಿಗೆ ಶರಣಾರ್ಥಿ ಹೃದಯಸ್ಪರ್ಶಿ ಕಾರ್ಯಕ್ರಮ ನಡೆಯಲಿದೆʼ ಎಂದರು ವಿವರಿಸಿದರು.

ʼಅ.20ರಂದು ಮಧ್ಯಾಹ್ನ 12 ರಿಂದ 2 ರವರೆಗೆ ಮಹಿಳಾಗೋಷ್ಠಿ 3 ರಿಂದ 5 ರವರೆಗೆ ಯುವಗೋಷ್ಠಿ ನಡೆಯಲಿದ್ದು, ಅಂದು ಸಾಯಂಕಾಲ ಸಮಾರೋಪ ಸಮಾರಂಭವಾಗಲಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಬಸವ ಭಕ್ತರಿಗೆ ಪ್ರಸಾದ, ವಸತಿ ವ್ಯವಸ್ಥೆ ಇರಲಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕುʼ ಎಂದು ಶ್ರೀಗಳು ಮನವಿ ಮಾಡಿದರು.

Advertisements

ಬೀದರ ಬಸವ ಮಂಟಪದ ಸಂಚಾಲಕರು ಹಾಗೂ ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣದ ರಾಷ್ಟ್ರೀಯ ಅಧ್ಯಕ್ಷೆ ಪೂಜ್ಯ ಸತ್ಯಾದೇವಿ ಮಾತಾಜಿ ಮಾತನಾಡಿ, ʼಸ್ವಾಭಿಮಾನಿ ಕಲ್ಯಾಣ ಪರ್ವ ಎಂದರೆ ಕಲ್ಯಾಣದ ಹಬ್ಬ. ಪ್ರತಿಯೊಬ್ಬರೂ ಭಾಗವಹಿಸುವುದು ತಮ್ಮ ಆದ್ಯ ಕರ್ತವ್ಯ. ಮಹಿಳಾ ಗೋಷ್ಠಿಯಲ್ಲಿ ಮಹಿಳೆಯರ ಜ್ವಲಂತ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಚರ್ಚೆ ನಡೆಯಲಿದೆ. ಹೀಗಾಗಿ ಶರಣ ಬಂಧುಗಳು ತನು, ಮನ, ಧನ, ಸಮಯ, ಅಭಿಮಾನ ದಾಸೋಹಗೈದು ಕಾರ್ಯಕ್ರಮ ಯಶಸ್ವಿಗೊಳಿಸಬೇಕುʼ ಎಂದು ಕೋರಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ಸಾವು

ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ, ಲಿಂಗಾಯತ ಧರ್ಮ ಮಹಾಸಭಾದ ಔರಾದ ತಾಲೂಕಾಧ್ಯಕ್ಷ ಕಲ್ಲಪ್ಪ ದೇಶಮುಖ, ಪ್ರಮುಖರಾದ ಬಸವಂತರಾವ ಬಿರಾದಾರ, ರವಿಕಾಂತ ಬಿರಾದಾರ, ನಿರ್ಮಲಾ ನಿಲಂಗೆ, ಮಲ್ಲಿಕಾರ್ಜುನ ಬಿರಾದಾರ ಸಂಗಮ, ಮಲ್ಲಿಕಾರ್ಜುನ ಶಹಾಪುರ, ಓಂಪ್ರಕಾಶ ರೊಟ್ಟೆ, ಸೇರಿದಂತೆ ಇನ್ನಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X