ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

Date:

Advertisements

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ ನೊಳಂಬ ಲಿಂಗಾಯತ ಸಮುದಾಯದ ಮಠಾಧೀಶರು ಆಗ್ರಹಿಸಿದ್ದಾರೆ.

ತುಮಕೂರಿನ ಮುರುಘಾ ರಾಜೇಂದ್ರ ಸಭಾಭವನದಲ್ಲಿ ಶುಕ್ರವಾರ ಬೆಟ್ಟದಹಳ್ಳಿ ಮಠ
ಚಂದ್ರಶೇಖರ್ ಮಹಾಸ್ವಾಮಿಜಿ, ಗೊಲ್ಲಹಳ್ಳಿ ಮಠದ ವಿಭವವಿದ್ಯಾ ಶಂಕರ್ ಸ್ವಾಮಿಜಿ, ತಮ್ಮಡಿಹಳ್ಳಿ ಮಠದ ಮಲ್ಲಿಕಾರ್ಜುನ ದೇಸಿಕೇಂದ್ರ ಸ್ವಾಮಿಜಿ, ಗೋಡೆಕೆರೆ ಮಹಾ ಸಂಸ್ಥಾನ ಶ್ರೀ ಮೃತ್ಯುಂಜಯ ದೇಸಿಕೇಂದ್ರ‌ ಸ್ವಾಮಿಜಿಗಳು ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

“ರಾಜ್ಯದ 8 ಜಿಲ್ಲೆಯಲ್ಲಿ ನೊಳಂಬ ಲಿಂಗಾಯತರಿದ್ದಾರೆ. ಅದರಲ್ಲೂ ತುಮಕೂರಲ್ಲಿ ಅತಿಹೆಚ್ಚು ನೊಳಂಬ ಲಿಂಗಾಯತರಿದ್ದಾರೆ. ಹಾಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳು ತುಮಕೂರು ಜಿಲ್ಲೆಯ ಲೋಕಸಭಾ ಟಿಕೆಟ್ ನೊಳಂಬ ಲಿಂಗಾಯತರಿಗೆ ಕೊಡಬೇಕು” ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಹಾಸನ | ಹಂತನಮನೆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ; ಪ್ರಕರಣ ದಾಖಲಿಸಲು ಪೊಲೀಸರ ಮೀನಮೇಷ

ಪರೋಕ್ಷವಾಗಿ ವಿ.ಸೋಮಣ್ಣರನ್ನು ವಿರೋಧಿಸಿದ ಮಠಾಧಿಪತಿಗಳು, “ನೊಳಂಬ ಸಮುದಾಯಕ್ಕೆ ಸೇರಿದ ಬಿಜೆಪಿ ಆಕಾಂಕ್ಷಿ ಮಾಜಿ ಸಚಿವ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ವಕ್ತಾರ ಸಿ ಎನ್ ಚಂದ್ರಶೇಖರ್ ಅವರಿಗೆ ಟಿಕೆಟ್ ಕೊಡುವಂತೆ ಹಾಗೂ ಕಾಂಗ್ರೆಸ್‌ನಲ್ಲಿ ನೊಳಂಬ ಲಿಂಗಾಯತ ಸಮುದಾಯಕ್ಕೆ ಸೇರಿದ ತಿಪಟೂರು ಶಾಸಕ ಷಡಕ್ಷರಿ, ಮುಖಂಡ ಲೋಕೇಶ್ವರ್ ಅವರಿಗೆ ಟಿಕೆಟ್ ನೀಡಬೇಕು” ಎಂದು ಸ್ವಾಮೀಜಿಗಳು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X