ಟಿ. ನರಸೀಪುರ | ಕ್ಷುಲ್ಲಕ ಕಾರಣಕ್ಕೆ ಗಲಾಟೆ: ದಲಿತ ಯುವಕನಿಗೆ ಮನಬಂದಂತೆ ಥಳಿಸಿದ ಪೊಲೀಸರು!

Date:

Advertisements

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದಲ್ಲಿ ಒಂದೇ ಮನೆಯ ಅಣ್ಣ ತಮ್ಮ, ಅಕ್ಕತಂಗಿಯರ ಮಕ್ಕಳು ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದ ಟಿ. ನರಸೀಪುರ ಠಾಣಾ ಪೊಲೀಸರು ಕ್ಷುಲ್ಲಕ ಕಾರಣಕ್ಕೆ ಅರ್ಜುನ್ ಎಂಬ ದಲಿತ ಯುವಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಮನಬಂದಂತೆ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದಿನಾಂಕ-05-09-2025 ರಂದು ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧನಂಜಯ, ಸಬ್ ಇನ್ಸ್ ಪೆಕ್ಟರ್ ಜಗದೀಶ್ ದೂಳ್ ಶೆಟ್ಟಿ ಮತ್ತು ಇಬ್ಬರು ಪೊಲೀಸರು ಯಾವುದೇ ದೂರು ದಾಖಲಾಗದಿದ್ದರೂ, ಯಾವುದೇ ನೊಟೀಸ್ ನೀಡದೆ, ಠಾಣೆಗೆ ಕರೆದೊಯ ದೈಹಿಕವಾಗಿ ದಲಿತ ಯುವಕನನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸದರಿ ಗಲಾಟೆಯೂ ಕ್ಷುಲ್ಲಕವಾಗಿದ್ದು, ಮನೆಯವರೊಂದಿಗೆ ನಡೆದಿರುವ ಚಿಕ್ಕಪುಟ್ಟ ಗಲಾಟೆ ಎಂದು ತಿಳಿದು ಬಂದಿದೆ. ಪೊಲೀಸರು ಸೂಕ್ತವಾದ ತಿಳುವಳಿಕೆ ನೀಡಿ, ಮುಂದೆ ನಡೆಯದಂತೆ ಮಾರ್ಗದರ್ಶನ ನೀಡಬಹುದಿತ್ತು. ಆದರೆ, ದೂರು ಸ್ವೀಕಾರವಾಗದೆ ಠಾಣೆಗೆ ಕರೆದೊಯ್ದಿರುವುದು, ಮನಬಂದಂತೆ ಥಳಿಸಿದ ವಿಚಾರವಾಗಿ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಪ್ರಶಸ್ತಿಗಳು ನಮ್ಮನ್ನು ಅಣಕಿಸಬಾರದು : ಜಯಪ್ಪ ಹೊನ್ನಾಳಿ

ನ್ಯಾಯ ಎಲ್ಲಿದೆ? ನ್ಯಾಯ ಯಾರ ಬಳಿ ಕೇಳಬೇಕು? ನ್ಯಾಯ ನೀಡಬೇಕಾದವರೇ ಕಾನೂನು ಕೈಗೆ ತೆಗೆದುಕೊಳ್ಳುವುದು ಎಷ್ಟು ಸರಿ?. ಈ ಘಟನೆಗೆ ಕಾರಣರಾದ ತಪ್ಪಿತಸ್ಥ ಪೊಲೀಸರನ್ನು ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಅಮಾನತು ಮಾಡಿ, ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೖಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ.

1002139223
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X