ಚಾಮರಾಜನಗರ | ಅಂಗನವಾಡಿಗಳಲ್ಲಿ ಗುಣಮಟ್ಟದ ಆಹಾರ, ಮೂಲ ಸೌಕರ್ಯಕ್ಕೆ ಕ್ರಮ ವಹಿಸಿ : ಸಂಸದ ಸುನೀಲ್ ಬೋಸ್

Date:

Advertisements

ಚಾಮರಾಜನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್ ‘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಮೂಲ ಸೌಕರ್ಯದ ಜೊತೆಗೆ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ನೀಡುವ ಆಹಾರ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದು ‘ ಅಧಿಕಾರಿಗಳಿಗೆ ಸೂಚನೆ ನೀಡಿದರು.

” ಜಿಲ್ಲೆಯಲ್ಲಿ ಸಾಕಷ್ಟು ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳಿಲ್ಲದೇ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಬಾಡಿಗೆ ಕಟ್ಟಡಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಇದಕ್ಕಾಗಿ, ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಯಾ ತಾಲೂಕು ತಹಶೀಲ್ದಾರರೊಂದಿಗೆ ಸಮನ್ವಯ ಸಾಧಿಸಿ ಅಂಗನವಾಡಿ ಕಟ್ಟಡಗಳಿಗೆ ಜಾಗ ಗುರುತಿಸಿ ಮಂಜೂರು ಮಾಡಿಸಿಕೊಳ್ಳಬೇಕು. ಅಂಗನವಾಡಿಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡುವ ಕಾರ್ಯ ಒಂದು ತಿಂಗಳೊಳಗೆ ಪೂರ್ಣಗೊಳಿಸುವಂತೆ ” ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ವರ್ಗಗಳ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಹಾಡಿಗಳಲ್ಲಿ ವಿತರಿಸುವ ಪೌಷ್ಠಿಕ ಆಹಾರ (ನ್ಯೂಟ್ರಿಷಿಯನ್ ಫುಡ್) ಕಳಪೆಯಾಗಿರುವ ಬಗ್ಗೆ ದೂರುಗಳಿವೆ. ಮುಂದಿನ ದಿನಗಳಲ್ಲಿ ಹಾಡಿ ಜನರಿಗೆ ಸರಬರಾಜಾಗುವ ಆಹಾರ ಗುಣಮಟ್ಟದಿಂದ ಕೂಡಿರುವ ಬಗ್ಗೆ ಅಧಿಕಾರಿಗಳಿಗೆ ಪರಿಶೀಲಿಸಿ ಕ್ರಮ ವಹಿಸಬೇಕು. ಕೇಂದ್ರ ಪುರಸ್ಕೃತ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.

Advertisements

ಇ-ಸ್ವತ್ತು ನೀಡುವ ಸಂಬಂಧ ಜನಸಾಮಾನ್ಯರನ್ನು ಕಚೇರಿಗೆ ಅಲೆದಾಡಿಸಬಾರದು. ನಿಗದಿತ ಕಾಲಮಿತಿಯಲ್ಲಿ ಇ-ಸ್ವತ್ತು ನೀಡಲು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರಿಕೆ ವಹಿಸಿ ಶೀಘ್ರವಾಗಿ ಖಾತೆ ಮಾಡಿಕೊಡಬೇಕು. ಕಂದಾಯ ಇಲಾಖೆಯಲ್ಲಿ ಮದ್ಯವರ್ತಿಗಳ ಹಾವಳಿ ತಡೆಗಟ್ಟಬೇಕು. ಆಸ್ತಿ ಹಾಗೂ ಜಮೀನಿನ ಸರ್ವೇ ಕಾರ್ಯ ಹಾಗೂ ಒತ್ತುವರಿ ತೆರವುಗೊಳಿಸುವಿಕೆ ಚುರುಕುಗೊಳಿಸಬೇಕು.

ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಮಹದೇಶ್ವರ ಬೆಟ್ಟ ಹಾಗೂ ಗೋಪಿನಾಥಂ ಗ್ರಾಮಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ. ಕಾಮಗಾರಿ ಸಮಯದಲ್ಲಿ ಸಾಕಷ್ಟು ರಸ್ತೆಗಳನ್ನು ಅಗೆದು ಮುಚ್ಚದೇ ಬಿಟ್ಟಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ದಾಖಲಾಗುತ್ತಿವೆ. ಅರಣ್ಯ ಇಲಾಖೆ ಕಾಮಗಾರಿ ಅನುಷ್ಠಾನಕ್ಕೆ ಸಹಕಾರ ನೀಡಬೇಕು. ಪುಣಜನೂರು ಸೇರಿದಂತೆ 21 ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಕಾಮಗಾರಿಯ ಪೈಪ್ ಲೈನ್ ಅಳವಡಿಕೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಯಾವುದೇ ತೊಂದರೆ ನೀಡಬಾರದು. ಕಾಮಗಾರಿಯನ್ನು ವೇಗಗೊಳಿಸಿ ಜನರಿಗೂ ಅನೂಕೂಲ ಮಾಡಿಕೊಡಬೇಕು ಎಂದರು.

ಇತ್ತೀಚೆಗೆ ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಶಾಲೆಯಲ್ಲಿ ಮಕ್ಕಳು ವರ್ಗಾವಣೆ ಪತ್ರ ಪಡೆದಿರುವ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಂಸದರು ಮಕ್ಕಳು ಮತ್ತೆ ಶಾಲೆಗೆ ಹಾಜರಾಗಿರುವ ಬಗ್ಗೆ ಹಾಗೂ ಅಡುಗೆ ಕೆಲಸದ ಮಹಿಳೆಯನ್ನು ಅಲ್ಲಿಯೇ ಮುಂದುವರಿಸಿರುವ ಹಾಗೂ ಹೊಸ ಶಿಕ್ಷಕರನ್ನು ನೇಮಕ ಮಾಡಿರುವ ಕುರಿತು ಪರಿಶೀಲನೆ ನಡೆಸಿದರು. ಯಾವುದೇ ಗೊಂದಲಗಳನ್ನು ಪರಿಹರಿಸಿ ಹೊಂದಾಣಿಕೆಯಿಂದ ಕೆಲಸ ಮಾಡುವಂತೆ ಅಧಿಕಾರಿಗಳು ಶಿಕ್ಷಕರಿಗೆ ತಿಳಿಹೇಳಬೇಕು ಎಂದು ಹೇಳಿದರು.

ಜಿಲ್ಲೆಯ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯ ಅರಣ್ಯದಲ್ಲಿ ಹುಲಿಗಳು ಸಾವಿಗೀಡಾದ ಕುರಿತು ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದ ಸಂಸದರು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಅವಘಡಗಳಿಗೆ ಅವಕಾಶವಾಗದಂತೆ ತೀವ್ರ್ರ ಕಟ್ಟೆಚ್ಚರ ವಹಿಸಬೇಕು. ಜಿಲ್ಲೆಯ ಅರಣ್ಯ, ವನ್ಯಜೀವಿ ಸಂಪತ್ತನ್ನು ಸಂರಕ್ಷಣೆಯತ್ತ ಗಮನ ಹರಿಸುವಂತೆ ತಾಕೀತು ಮಾಡಿದರು.

ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಿರ್ವಹಿಸುವಲ್ಲಿ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ. ಕಾಮಗಾರಿಗಳನ್ನು ಅದಷ್ಟು ಬೇಗನೇ ಪೂರ್ಣಗೊಳಿಸಬೇಕು. ಯಾವುದೇ ಅನುದಾನ ವಾಪಸ್ಸು ಸರ್ಕಾರಕ್ಕೆ ಹೋಗದಂತೆ ಎಚ್ಚರ ವಹಿಸಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ ಚಾಮರಾಜನಗರ ಪಟ್ಟಣದಲ್ಲಿ ಹೊಸ ಬಡಾವಣೆಗಳ ರಚನೆಯಾಗಿವೆ. ಆದರೆ, ಮೂಲ ಸೌಕರ್ಯಗಳಿಲ್ಲದೆ ಜನರು ತೊಂದರೆಗೊಳಗಾಗಿದ್ದಾರೆ. ಹೊಸ ಬಡಾವಣೆಗಳಿಗೆ ಸಮರ್ಪಕ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲವಾಗಿವೆ. ಇದನ್ನು ಕೂಡಲೇ ಅಧಿಕಾರಿಗಳು ಪರಿಹರಿಸಬೇಕು ಎಂದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಕುಡಿಯುವ ನೀರು, ರಸ್ತೆ ನಿರ್ಮಾಣ, ಬೀದಿ ದೀಪ ಅಳವಡಿಕೆ ಸೇರಿದಂತೆ ನಗರೋತ್ಥಾನ ಕಾಮಗಾರಿ ಅನುಷ್ಟಾನದಲ್ಲಿ ಸಮಸ್ಯೆಗಳಿದ್ದರೆ ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ಕಾಮಗಾರಿಗಳ ವಹಿಸಿಕೊಂಡಿರುವ ಗುತ್ತಿಗೆದಾರರು ನಿಯಮಿಯ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು. ಮುಂದಿನ ಸಭೆಯೊಳಗೆ ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಿತ್ತೂರು ರಾಣಿ ಚನ್ನಮ್ಮ ಶಾಲೆಗೆ ದಿಡೀರ್ ಭೇಟಿ ನೀಡಿದ ಸಚಿವ ಮಹದೇವಪ್ಪ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್. ವಿ. ಚಂದ್ರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಸೇರಿದಂತೆ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X