ಬಸವನ ಬಾಗೇವಾಡಿ | ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಲಿತ ಸಾಹಿತಿಯನ್ನು ಅಧ್ಯಕ್ಷರನ್ನಾಗಿಸಲು ಮನವಿ

Date:

Advertisements

ಬಸವನ ಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನವೆಂಬರ್‌ ತಿಂಗಳಲ್ಲಿ ಹಮ್ಮಿಕೊಂಡಿರುವ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ದಲಿತ ಸಾಹಿತಿಯನ್ನು ಆಯ್ಕೆ ಮಾಡಬೇಕೆಂದು ಆಗ್ರಹಿಸಿ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್‌ಗೆ ಮನವಿ ಸಲ್ಲಿಸಲಾಯಿತು.

ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಅಧ್ಯಕ್ಷ ಮುತ್ತುರಾಜ್ ಬಾಗೇವಾಡಿಯವರ ನೇತೃತ್ವದ ನಿಯೋಗವು ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಸರ್ವರ ಬದುಕನ್ನು ಹಸನಾಗಿಸಿದ ಬಸವೇಶ್ವರ ಜನ್ಮ ಭೂಮಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಜರುಗುತ್ತಿದೆ. ಹಿಂದಿನ ಒಂಭತ್ತು ತಾಲೂಕು ಸಮ್ಮೇಳನದಲ್ಲಿ ವಿವಿಧ ಜನಾಂಗಕ್ಕೆ ಸೇರಿದ ಸಾಹಿತಿಗಳನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ತಾಲೂಕು ಸಮ್ಮೇಳನದಲ್ಲಿ ಒಮ್ಮೆಯೂ ದಲಿತ ಸಾಹಿತಿಯನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿಲ್ಲ. ಈ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿಯಾದರೂ ದಲಿತ ಸಾಹಿತಿಯನ್ನು ಪರಿಗಣಿಸಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು. ಬಸವೇಶ್ವರ ತತ್ವ ಮೈಗೂಡಿಸಿಕೊಂಡಿರುವ ನೀವು ದಲಿತ ಸಾಹಿತಿಯನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆಮಾಡಬೇಕೆಂದು ಮನವಿ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ರಾಮನಗರ | ಹಣಕ್ಕೆ ಬೇಡಿಕೆಯಿಟ್ಟ ಆರೋಪ: ಹಾರೋಹಳ್ಳಿ ಪ. ಪಂ. ಮುಖ್ಯಾಧಿಕಾರಿ ಶ್ವೇತಾ ಅಮಾನತು

ಈ ಸಂದರ್ಭದಲ್ಲಿ ವೈ.ಎಸ್.ಪಡಸಲಗಿ, ತಮ್ಮಣ್ಣ ಕಾನಾಗಡ್ಡಿ, ರಾಮಪ್ಪ ನನ್ನಿಕೇರಿ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X